ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕಾಗಿ ಮಂಗಳವಾರ ಶಿವಮೊಗ್ಗಕ್ಕೆ ಬಂದಿಳಿದ ತಕ್ಷಣ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಹೆಲಿಕಾಪ್ಟರ್ ಪರೀಶೀಲಿಸಿದರು....
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕಾಗಿ ಮಂಗಳವಾರ ಶಿವಮೊಗ್ಗಕ್ಕೆ ಬಂದಿಳಿದ ತಕ್ಷಣ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಹೆಲಿಕಾಪ್ಟರ್ ಪರೀಶೀಲಿಸಿದರು.
ಇಂದು ಬೆಳಗ್ಗೆ ಶಿವಮೊಗ್ಗ ಹೆಲಿಪ್ಯಾಡ್ ಗೆ ಬಂದಿಳಿದಿ ಮಾಜಿ ಸಿಎಂ ಹೆಲಿಕಾಪ್ಟರ್ ಹಾಗೂ ಅವರ ಲಗೇಜ್ ಅನ್ನು ಅಧಿಕಾರಿಗಳು ತಪಾಸಣೆ ನಡೆಸಿದರು. ಆದರೆ ಏನೂ ಪತ್ತೆಯಾಗಿಲ್ಲ ಎಂದರು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಏಪ್ರಿಲ್ 18 ಹಾಗೂ ಏಪ್ರಿಲ್ 23ರಂದು ಮತದಾನ ನಡೆಯಲಿದೆ.
#WATCH Election Commission flying squad checks luggage of former Karnataka Chief Minister and BJP leader BS Yeddyurappa at helipad in Shivamogga, Karnataka pic.twitter.com/uZAdRCA5sO