ಬೆಂಗಳೂರು :ನಗರದ ಹೃದಯ ಭಾಗ ಚಿಕ್ಕಪೇಟೆಯಲ್ಲಿನ ಪ್ರಭಾತ್ ಕಾಂಪ್ಲೆಕ್ಸ್ ನಲ್ಲಿ ನಕಲಿ ಗುರುತಿನ ಚೀಟಿ ತಯಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ನೂರಾರು ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಬಿಜೆಪಿ ಕಾನೂನು ಘಟಕದಿಂದ ದೂರು ಸಲ್ಲಿಸಲಾಗಿದೆ ಎಂದು ಆ ಪಕ್ಷದ ಟ್ವಿಟರ್ ನಲ್ಲಿ ಹೇಳಲಾಗಿದೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಇಬ್ರಾಹೀಂ ಖಲೀಲುಲ್ಲಾ ಪ್ರಭಾತ್ ಕಾಂಪ್ಲೆಕ್ಸ್ ನ ಮೂರನೇ ಅಂತಸ್ತಿನ 507 ಕೊಠಡಿಯಲ್ಲಿ ನಕಲಿ ಗುರುತಿನ ಚೀಟಿ ತಯಾರಿಸುತ್ತಿದ್ದಾಗ ಬಿಜೆಪಿ ಕಾರ್ಪೋರೇಟರ್ ಹಾಗೂ ಕಾರ್ಯಕರ್ತರ ಕೈಗೆ ಸಿಕ್ಕಿ ಬಿದಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಆತನ ಜೊತೆಯಲ್ಲಿದ್ದ 18 ಮಂದಿಯನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.
ಈ ಕೃತ್ಯದ ಹಿಂದೆ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅರ್ಷದ್ ರಿಜ್ವಾನ್ ಕೈವಾಡದ ಶಂಕೆ ಇದ್ದು, ವಿಚಾರಣೆ ಪೂರ್ಣಗೊಳ್ಳುವವರೆಗೂ ಆತ ಚುನಾವಣೆಗೆ ಸ್ಪರ್ಧಿಸದಂತೆ ಚುನಾವಣಾ ಆಯೋಗ ನಿರ್ಬಂಧಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
Advertisement