ಬೆಂಗಳೂರು: ನಕಲಿ ಗುರುತಿನ ಚೀಟಿ ತಯಾರಿಕೆ ಪತ್ತೆ, ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
Published: 16th April 2019 12:00 PM | Last Updated: 16th April 2019 01:27 AM | A+A A-

ಸಾಂದರ್ಭಿಕ ಚಿತ್ರ
ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಇಬ್ರಾಹೀಂ ಖಲೀಲುಲ್ಲಾ ಪ್ರಭಾತ್ ಕಾಂಪ್ಲೆಕ್ಸ್ ನ ಮೂರನೇ ಅಂತಸ್ತಿನ 507 ಕೊಠಡಿಯಲ್ಲಿ ನಕಲಿ ಗುರುತಿನ ಚೀಟಿ ತಯಾರಿಸುತ್ತಿದ್ದಾಗ ಬಿಜೆಪಿ ಕಾರ್ಪೋರೇಟರ್ ಹಾಗೂ ಕಾರ್ಯಕರ್ತರ ಕೈಗೆ ಸಿಕ್ಕಿ ಬಿದಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಆತನ ಜೊತೆಯಲ್ಲಿದ್ದ 18 ಮಂದಿಯನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.
ಈ ಕೃತ್ಯದ ಹಿಂದೆ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅರ್ಷದ್ ರಿಜ್ವಾನ್ ಕೈವಾಡದ ಶಂಕೆ ಇದ್ದು, ವಿಚಾರಣೆ ಪೂರ್ಣಗೊಳ್ಳುವವರೆಗೂ ಆತ ಚುನಾವಣೆಗೆ ಸ್ಪರ್ಧಿಸದಂತೆ ಚುನಾವಣಾ ಆಯೋಗ ನಿರ್ಬಂಧಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
BJP legal cell has lodged a complaint with EC against this anti democratic act.
— BJP Karnataka (@BJP4Karnataka) April 15, 2019
Congress is corrupt, anti democratic, anti constitutional & dangerous for this Nation.
We request EC to act on this on priority. pic.twitter.com/rosd9CtDUf