ಈ ನಾಲ್ಕು ವಾರಗಳಲ್ಲಿ ರಾಜಕಾರಣಿಗಳಲ್ಲಿ ರಾಕ್ಷಸತ್ವವನ್ನು ನೋಡಿದೆ. ನಿಜವಾಗಲೂ ಬೇಜಾರಾಗುತ್ತೆ. ಒಂದೇ ದಿನದಲ್ಲಿ ತೆಗೆದುಕೊಂಡಿರುವ ತೀರ್ಮಾನ ಇದಲ್ಲ. ಬಹಳಷ್ಟು ಯೋಚನೆ ಮಾಡಿ ಈ ನಿರ್ಧಾರಕ್ಕೆ ಬಂದೆ. ಒಂದಷ್ಟು ಸ್ನೇಹ ಸಂಬಂಧಗಳು ಹಾಳಾಗಬಹುದು ಎಂದು ಗೊತ್ತಿತ್ತು. ನಾನು ಮೊದಲನೇ ಹೆಜ್ಜೆ ಹಾಕಿದಾಗ ಅದು ಒಂಟಿ ಹೋರಾಟ, ಆದರೆ ಇವತ್ತು ನಾನು ಒಂಟಿಯಲ್ಲ. ಇವತ್ತು ನನ್ನ ಜೊತೆ ನಿಂತಿರುವ ಕಾಂಗ್ರೆಸ್ ಕಾರ್ಯಕರ್ತರಿಗೆ, ರೈತರ ಸಂಘಟಕ್ಕೆ, ಬಿಜೆಪಿ ಕಾರ್ಯಕರ್ತರಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದಿಂದ ಉಚ್ಛಾಟನೆಗೊಂಡರೂ ಸ್ವಾಭಿಮಾನಕ್ಕಾಗಿ ನನ್ನ ಜೊತೆ ಅವರೆಲ್ಲಾ ನಿಂತಿದ್ದಾರೆ. ಅವರ ಜೊತೆ ನಾನು ಯಾವತ್ತೂ ಇರ್ತೇನೆ ಎಂದರು.