ಈ ಹಿಂದೆಯೇ ಮಂಡ್ಯದ ಶಂಕರನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ನಾನು ಈ ಮೊದಲೇ ಸ್ಪಷ್ಟಪಡಿಸಿದ್ದೀನಿ. ಯಾವುದೇ ಪಕ್ಷಕ್ಕೆ ಹೋಗಲ್ಲ. ವಿರೋಧಿಗಳು ದಿನಾ ಒಂದೊಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಒಂದು ದಿನ ಬಿಜೆಪಿ ಅಭ್ಯರ್ಥಿ, ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಅಂದರು. ಬೇಕಾದರೆ ಜೆಡಿಎಸ್ ಅಭ್ಯರ್ಥಿ ಎಂದೂ ಹೇಳುತ್ತಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿದ್ದೇನೆ. ನನಗೆ ಯಾರು ಸಪೋರ್ಟ್ ಮಾಡುತ್ತಾರೋ ಅವರು ಯಾವುದೇ ಷರತ್ತು ಹಾಕದೆ ಬೆಂಬಲ ನೀಡುತ್ತಿದ್ದಾರೆ. ಗೆದ್ದರೆ ನನ್ನ ಕ್ಷೇತ್ರದ ಜನ ಯಾವ ಪಕ್ಷಕ್ಕೆ ಬೆಂಬಲ ನೀಡಿ ಎಂದು ಹೇಳುತ್ತಾರೆಯೋ ಅವರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಹೇಳಿದ್ದರು.