ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಇಸ್ರೇಲ್ಗೆ ಭೇಟಿ ನೀಡಿದಂತಹ ಸಂದರ್ಭದಲ್ಲಿ ನನಗೆ ಹೃದಯಾಘಾತವಾಯಿತು. ಆ ಸಂದರ್ಭದಲ್ಲಿ ದೇಶಕ್ಕೆ ವಾಪಸಾಗುವಂತೆ ಸ್ನೇಹಿತರು, ಪಕ್ಷದ ಮುಖಂಡರು ನನಗೆ ಸಲಹೆ ನೀಡಿದರು. ಆದರೆ ರಾಜ್ಯದ ರೈತರಿಗಾಗಿ ನನ್ನ ಗಂಭೀರ ಆರೋಗ್ಯ ಪರಿಸ್ಥಿತಿಯನ್ನೂ ಲೆಕ್ಕಿಸದೇ ಇಸ್ರೇಲ್ ಮಾದರಿ ಕೃಷಿ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿದ್ದೇನೆ. ಅಲ್ಲಿನ ರೈತ ಸಂಘಟನೆ, ಕೃಷಿ ಕಂಪೆನಿಗಳ ಜೊತೆ ಚರ್ಚೆ ನಡೆಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ರೈತರಿಗಾಗಿ ರಾಜ್ಯಾದ್ಯಂತ ಇಸ್ರೇಲ್ ಮಾದರಿಯ ಕೃಷಿ ಪದ್ಧತಿ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದರು.