ಬಿಜೆಪಿ ಶಾಸಕರ ಆರೋಪಕ್ಕೆ ಸ್ಪಷ್ಟೀಕರಣ ನೀಡಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಎಂಟು ತಿಂಗಳಿನಿಂದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ರದ್ದುಗೊಳಿಸುವುದು, ವರ್ಗಾವಣೆ ಪ್ರಕ್ರಿಯೆ ನಡೆಸಲಾಗಿದೆ. ಕೆಲವರು ಫಾರಂ ನಂಬರ್ 6 ಭರ್ತಿ ಮಾಡಿಕೊಟ್ಟಿಲ್ಲ, ಮಾರ್ಚ್ 15 ವರೆಗೆ ಮತದಾರರ ಪಟ್ಟಿಗೆ ಸೇರ್ಪಡೆ, ರದ್ದುಗೊಳಿಸಲು ಅವಕಾಶವಿತ್ತು. ಚುನಾವಣೆಗೂ ಮುನ್ನವೇ ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಬೋಗಸ್ ಮತದಾರರ ಹೆಸರು ಸೇರ್ಪಡೆ, ಅಥವಾ ರದ್ದತಿ ಬಗ್ಗೆ ಮಾಹಿತಿ ನೀಡಬೇಕಿತ್ತು. ಈಗ ಹೇಳಿದರೆ ಏನು ಪ್ರಯೋಜನ ಎಂದು ಅಸಮಾಧಾನ ವ್ಯಕ್ತಪಡಿಸಿದರು.