ಬೆಂಗಳೂರು, ಹಾಸನ, ಮಂಡ್ಯ ಸೇರಿದಂತೆ ಹಲವೆಡೆ ಮತಯಂತ್ರಗಳು ಸ್ಥಗಿತಗೊಂಡು ಮತದಾರರು ಮತ್ತು ಚುನಾವಣಾ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ. ಮುಂಜಾನೆಯಿಂದಲೇ ರಾಜ್ಯದ ಅನೇಕ ಕಡೆಗಳಲ್ಲಿ ಜನಸಾಮಾನ್ಯರು, ವಯೋವೃದ್ಧರು, ವಿಶೇಷ ಚೇತನರು, ಲಿಂಗತ್ವ ಅಲ್ಪಸಂಖ್ಯಾತರು , ರಾಜಕಾರಣಿಗಳು, ಚಿತ್ರನಟರು ಸೇರಿ ಅನೇಕರು ಮತಗಟ್ಟೆಗೆ ತೆರಳಿ ಮತಚಲಾಯಿಸಿದರು. ಇದೇ ಮೊದಲ ಬಾರಿಗೆ ಮತಚಲಾಯಿಸುತ್ತಿರುವ ಯುವ ಮತದಾರರು ಅಮಿತೋತ್ಸಾಹದಿಂದ ಮತದಾನ ಮಾಡುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂದಿತ್ತು.