ಎಎನ್ಐ ಸುದ್ದಿಸಂಸ್ಥೆಗೆ ವಿಶೇಷ ಸಂದರ್ಶನ ನೀಡಿದ ಅವರು, ಲೋಕಸಭಾ ಚುನಾವಣೆಗೆ ಈ ಬಾರಿ ತಾವು ಸ್ಪರ್ಧಿಸಿದ ಬಗ್ಗೆ ಕೂಡ ಮಾತನಾಡಿದರು. ಮೂರು ವರ್ಷದ ಹಿಂದೆ ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಆದರೆ ಈ ಬಾರಿ ನಾನು ಒತ್ತಾಯಪೂರ್ವಕವಾಗಿ ಸ್ಪರ್ಧಿಸುವ ಸಂದರ್ಭ ಒದಗಿ ಬಂತು. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ನನಗೆ ಈ ಸಂದರ್ಭದಲ್ಲಿ ಯಾವುದೇ ಆಸೆ-ಆಕಾಂಕ್ಷೆಗಳಿಲ್ಲ. ಆದರೆ ನಾನು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ ಎಂದು ಈ ಸಂದರ್ಭದಲ್ಲಿ ಹೇಳುತ್ತೇನೆ ಎಂದರು.