ಸಹಕಾರ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ತುಂಬಾ ಚೆನ್ನಾಗಿ ಆಗಿದೆ. ಮತದಾನ ಮಾಡಿದ ಎಲ್ಲರಿಗೂ ಅಭಿನಂಧನೆ. ಫಲಿತಾಂಶದ ನಂತರವೂ ಮೈತ್ರಿ ಸರ್ಕಾರ ಸದೃಢವಾಗಿರುತ್ತೆ. ಮೈತ್ರಿ ಸರ್ಕಾರವನ್ನ ಬೀಳಿಸಲು ಬಿಜೆಪಿ ನಾಯಕರು ಮಾಡಿದ ಎಲ್ಲಾ ಪ್ರಯತ್ನ ವಿಫಲವಾಯಿತು. ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಸಾಧ್ಯವಿಲ್ಲ. ನಾಳೆಯಿಂದ ಸಚಿವನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ.