ಕೇಂದ್ರ ಸರ್ಕಾರ ಜಾರಿಗೆ ತಂದ ಜಿಎಸ್ ಟಿ ಯಿಂದ ಸಾಕಷ್ಟು ಸಮಸ್ಯೆ ಎದುರಾಗಿದೆ. ನಾವು ಅಧಿಕಾರಕ್ಕೆ ಬಂದಲ್ಲಿ ಗಬ್ಬರ್ ಸಿಂಗ್ ತೆರಿಗೆಯನ್ನು ಸರಳಗೊಳಿಸಿ, ಅರ್ಥ ವ್ಯವಸ್ಥೆಯನ್ನು ಸದೃಢಗೊಳಿಸುತ್ತೇವೆ. ನ್ಯಾಯ್ ಯೋಜನೆ ಮೂಲಕ ಬಡವರ ಖಾತೆಗೆ ಪ್ರತಿ ವರ್ಷ 72 ಸಾವಿರ ರೂ ಜಮೆ ಮಾಡುತ್ತೇವೆ. ಇದಕ್ಕಾಗಿ ಹಣ ಎಲ್ಲಿಂದ ತರುತ್ತೀರಿ ಎಂದು ಕೇಳುತ್ತಿದ್ದಾರೆ. ಅಂಬಾನಿ, ಅದಾನಿ, ಮೆಹುಲ್ ಚೋಕ್ಸಿಯಂತಹ ಕಳ್ಳರಿಂದ ಕಿತ್ತು ಬಡವರ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತೇವೆ. ಚೌಕಿದಾರ್ ಪ್ರಧಾನಿ ಮೋದಿ ಅನಿಲ್ ಅಂಬಾನಿ, ಮೆಹುಲ್ ಚೋಕ್ಸಿ, ಅದಾನಿ ಅವರಿಗೆ ಸಹಸ್ರಾರು ಕೋಟಿ ರೂ ನೀಡಿದರು. ಶ್ರೀಮಂತರ ಸಾಲ ಮನ್ನಾ ಮಾಡಿದ್ದಾರೆ. ಮೋದಿ ಸರ್ಕಾರ ಐದು ವರ್ಷಗಳಲ್ಲಿ ಅನ್ಯಾಯ ಮಾಡಿದೆ. ಅದಕ್ಕಾಗಿ ನ್ಯಾಯ್ ಯೋಜನೆ ಜಾರಿಗೆ ತರುತ್ತಿದ್ದೇವೆ ಎಂದರು.