ಮಂಡ್ಯದಲ್ಲಿ ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವು ಸಾಧಿಸಲಿದ್ದಾರೆ. ಮಂಡ್ಯ, ಹಾಸನದಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತ ಕಚ್ಚಾಟ ಬಿಜೆಪಿಗೆ ಲಾಭವಾಗಲಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಸೋಲಿನ ಭೀತಿಯಿಂದ ಹತಾಶೆಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ನಂತರ ಸಮ್ಮಿಶ್ರ ಸರ್ಕಾರ ಸಿದ್ದರಾಮಯ್ಯ ಅವರಿಂದಲೇ ಪತನಗೊಳ್ಳುತ್ತದೆ. ಇದಕ್ಕೆ ಅವರೇ ಮಹೂರ್ತ (ಟೈಮ್ ಬಾಂಬ್) ಕೂಡ ನಿಗದಿ ಮಾಡಿದ್ದಾರೆ ಎಂದರು.