ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡಿ, ಸೋನಿಯಾ ಗಾಂಧಿಯವರು ಈ ಪಿತೂರಿಯಲ್ಲಿ ಭಾಗಿಯಾಗಿದ್ದು ಅಚ್ಚರಿಯನ್ನುಂಟುಮಾಡುತ್ತಿದೆ. ಪತ್ರದಲ್ಲಿ ಪಾಟೀಲ್ ಅವರು, ನೀವು ಸಲಹೆ ನೀಡಿದಂತೆ ಎಂಬ ಒಕ್ಕಣೆಯಿಂದ ಆರಂಭಿಸಿದ್ದು ನೋಡಿದರೆ ಈ ವಿಚಾರದಲ್ಲಿ ಸೋನಿಯಾ ಗಾಂಧಿಯವರೇ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಾರ್ಗದರ್ಶನ ಮಾಡಿದ್ದಾರೆ ಎಂದು ಗೊತ್ತಾಗುತ್ತದೆ ಎಂದರು.