ಜಿಲ್ಲೆಯ ಅಣ್ಣಿಗೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ನಿನ್ನೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ಚೆನ್ನಮ್ಮನವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಬಹುದಿತ್ತು ಎಂದು ನಾನು ಹೇಳಿದ್ದರಲ್ಲಿ ತಪ್ಪೇನಿದೆ, ಮುಖ್ಯಮಂತ್ರಿ ಕುಮಾರಸ್ವಾಮಿಯವರು ನನ್ನ ಮಾತಿಗೆ ಖುಷಿ ಪಡುವುದು ಬಿಟ್ಟು ಬೇಸರಪಟ್ಟುಕೊಳ್ಳುವುದು ಏಕೆ, ದೇವೇಗೌಡರ ಕುಟುಂಬ ಸದಸ್ಯರು, ನೆಂಟರು ಎಲ್ಲರೂ ರಾಜಕೀಯದಲ್ಲಿದ್ದಾರೆ. ಇದು ಸಂತುಷ್ಟ ಕುಟುಂಬ ಆಗಬೇಕಾದರೆ ಚನ್ನಮ್ಮರನ್ನು ರಾಜ್ಯಸಭಾ ಸದಸ್ಯರನ್ನಾಗಿಸಬೇಕು ಎಂದು ಸಲಹೆ ಕೊಟ್ಟಿದೆ. ನಾನು ಹೀಗೆ ಹೇಳಿದ್ದು ನೋವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರಂತೆ. ಆದರೆ ನಾನು ಹೇಳಿದ್ದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.