ಮೊದಲಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನದ ವೇಳೆ(ಏಪ್ರಿಲ್ 18) ಚಾಮರಾಜ ನಗರದಲ್ಲಿ ಮತಗಟ್ಟೆ ಅಧಿಕಾರಿ ಶಾಂತಮೂರ್ತಿ(48) ಹೃದಯಾಘಾತದಿಂದ ಮೃತಪಟ್ಟಿದ್ದರು. ಸುಲ್ತಾನ ಷರೀಫ್ ಸರ್ಕಲ್ ಬಳಿ ಮತಗಟ್ಟೆ ಸಂಖ್ಯೆ 48 ರಲ್ಲಿ ಇವರು ಚುನಾವಣಾ ಕರ್ತವ್ಯ ನಿರ್ವಹಿಸುವಾಗ ಸಾವನ್ನಪ್ಪಿದ್ದರು. ಶಾಂತಮೂರ್ತಿ ಹನೂರು ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.