ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ, ನಮಗೆ ಪಕ್ಷವಷ್ಟೇ ಮುಖ್ಯ, ಅದನ್ನು ನಾವು ಸರಿಪಡಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ. ಮೇ 23ರಂದು ಫಲಿತಾಂಶ ಬರಲಿದೆ, ಅದಾದ ನಂತರ ಸರ್ಕಾರ ಸಲೀಸಾಗಿ ನಡೆಯಲಿದೆ ಎಂದು ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ತಿಳಿಸಿದ್ದಾರೆ.