ಕಲಬುರ್ಗಿ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕಲಬುರ್ಗಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಮತದಾನದ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆಯಲಿದ್ದಾರೆ. ಖರ್ಗೆ ಮಂಗಳವಾರ(ಏ.23) ನಡೆದ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದ ವೇಳೆ ತಮ್ಮ ಪತ್ನಿ, ಕುಟುಂಬದವರೊಡನೆ ಆಗಮಿಸಿದ್ದು ಮತದಾನ ಮಾಡುವಾಗ ಅವರ ಪತ್ನಿಯನ್ನು ಸಹ ಇವಿಎಂ ಸಮೀಪಕ್ಕೆ ಕರೆದೊಯ್ದಿದ್ದರು. ಈ ಸಂಬಂಧ ಮಾದ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದ್ದು ಖರ್ಗೆ "ಗುಪ್ತ ಮತದಾನ" ನಿಯಮ ಉಲ್ಲಂಘಿಸಿದ್ದಾರೆಂದು ದೂರು ದಾಖಲಾಗಿತ್ತು. ಆದರೆ ಈಗ ಕ್ಷೇತ್ರದ ಉಪ ಕಮೀಷನರ್ ಮತ್ತು ರಿಟರ್ನಿಂಗ್ ಅಧಿಕಾರಿ (ಆರ್.ಒ.) ಅಗಿರುವ ವೆಂಕಟೇಶ್ ಕುಮಾರ್ ಪ್ರಕರಣ ಸಂಬಂಧ ಬೂತ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಿದ್ದಾರೆ.