ಸಿದ್ದರಾಮಯ್ಯನವರಿಗೆ ಇಲ್ಲಿ ಎರಡು ಸವಾಲುಗಳಿವೆ. ಅದು ಮೈಸೂರು ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಜಯ ಸಾಧಿಸುವುದು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ನಂತರ ಸಿದ್ದರಾಮಯ್ಯನವರು ಬಾದಾಮಿ ಕ್ಷೇತ್ರಕ್ಕೆ ಹೋದರು. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ರಾಜಕೀಯ ಪುನರುಜ್ಜೀವವನ್ನು ಕಂಡುಕೊಂಡಿದ್ದಾರೆ. ಇಲ್ಲಿ ಈ ಬಾರಿ ಸಿದ್ದರಾಮಯ್ಯನವರು ಪ್ರಚಾರ ಕೈಗೊಂಡಿದ್ದರು.