ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿ ಸುಳ್ಳಿನ ಕಂತೆಯಾಗಿದೆ.ಈ ಬಗ್ಗೆ ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ ಕಾನೂನು ಸಲಹೆ ಪಡೆದು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಈ ವಿಷಯ ಮುಗಿದ ಅಧ್ಯಾಯವಾಗಿದೆ.ರಾಜಕೀಯ ಲಾಭ ಪಡೆಯುವ ಉದ್ದೇಶ ಇದರ ಹಿಂದಿದ್ದು, ಕಾಂಗ್ರೆಸ್ ನಾಯಕರು ದುರುದ್ದೇಶಪೂರಿತ ಅಪಪ್ರಚಾರ ಮತ್ತು ನಕಲಿ ಸುದ್ದಿಗಳನ್ನು ಹರಡುವುದರಲ್ಲಿ ನಿರತರಾಗಿದ್ದಾರೆ.ಈಗ ಪ್ರಸ್ತಾಪಿಸಿರುವ ಭ್ರಷ್ಟಾಚಾರ ಆರೋಪದ ಕುರಿತು ಈ ಹಿಂದೆಯೇ ವಿಚಾರಣೆ ನಡೆದು ಇದಕ್ಕೆ ಸಂಬಂಧಿಸಿದ ದಾಖಲೆಗಳೆಲ್ಲವೂ ನಕಲಿ ಎನ್ನುವುದು ಸಾಬೀತಾಗಿದೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Absolute nonsense, disgusting & desperate efforts by @INCIndia to release such fake diary, prove it at the earliest or face defamation case. pic.twitter.com/3sMkYTd3Kb
— Chowkidar B.S. Yeddyurappa (@BSYBJP) March 22, 2019
Advertisement