ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈಗಾಗಲೇ ರಾಜ್ಯಕ್ಕೆ ಬಂದು ಎರಡು ಬಾರಿ ಪ್ರಚಾರ ನಡೆಸಿದ್ದಾರೆ, ಆದರೆ ಅಧಿಕೃತವಾಗಿ ಒಬ್ಬ ಅಭ್ಯರ್ಥಿಯ ಹೆಸರನ್ನು ಹೇಳಿಲ್ಲ. ಜೆಡಿಎಸ್ ವರಿಷ್ಠ ದೇವೇಗೌಡರು ಹಾಸನಕ್ಕೆ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಮತ್ತು ಮಂಡ್ಯಕ್ಕೆ ಮತ್ತೊಬ್ಬ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಘೋಷಿಸಿದ್ದಾರೆ, ಆದರೆ ಪಕ್ಷದಿಂದ ಮಾತ್ರ ಅಧಿಕೃತವಾಗಿ ಇನ್ನೂ ಅಭ್ಯರ್ಥಿಗಳ ಪಟ್ಟಿ ಹೊರಬಂದಿಲ್ಲ.