'ನಾನು,ಡಿಕೆಶಿವಕುಮಾರ್ ನಿಜವಾದ ಜೋಡೆತ್ತುಗಳು'- ಕುಮಾರಸ್ವಾಮಿ

ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ , ಹಿರಿಯ ಮುಖಂಡ ಡಿ. ಕೆ. ಶಿವಕುಮಾರ್ ಹಾಗೂ ನಾನು ನಿಜವಾದ ಜೋಡೆತ್ತುಗಳು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಟಾಂಗ್ ನೀಡಿದ್ದಾರೆ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

ಮಂಡ್ಯ: ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ , ಹಿರಿಯ ಮುಖಂಡ ಡಿ. ಕೆ. ಶಿವಕುಮಾರ್ ಹಾಗೂ ನಾನು  ನಿಜವಾದ ಜೋಡೆತ್ತುಗಳು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್  ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಟಾಂಗ್ ನೀಡಿದ್ದಾರೆ

ಮಂಡ್ಯದಲ್ಲಿ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಪಕ್ಷೇತರ ಅಭ್ಯರ್ಥಿ ಪರ ಪ್ರಚಾರ ಮಾಡಲು ಜೋಡೆತ್ತುಗಳು ಬರುವುದಾಗಿ ಹೇಳಿದ್ದಾರೆ.ಆ ಜೋಡೆತ್ತು ರೈತರ ಹೊಲ ಹೂಳಲು ಬರುತ್ತಿಲ್ಲ.ನೀವು ಬೆಳೆದ ಬೆಳೆಯನ್ನು ಅರ್ಧರಾತ್ರಿಯಲ್ಲಿ ಮೇಯ್ದು ಹೋಗಲು ಜೋಡೆತ್ತುಗಳು ಬರುತ್ತಿವೆ,ಅಂತಹ ಜೋಡೆತ್ತುಗಳು ನಿಮ್ಮಗೆ ಬೇಕೆ  ಎಂದು ಪ್ರಶ್ನಿಸಿದರು.

ರಾತ್ರೋ ರಾತ್ರಿ ಬೆಳೆಯನ್ನು  ಮೇಯ್ದು ಹೋಗುವ ಜೋಡೆತ್ತುಗಳನ್ನು ನಂಬಬೇಡಿ ಎಂದು ಹೇಳಿದ ಕುಮಾರಸ್ವಾಮಿ, ಡಿ. ಕೆ. ಶಿವಕುಮಾರ್ ಹಾಗೂ ನಾನು ನಿಜವಾದ ಜೋಡೆತ್ತುಗಳು, ರಾಜ್ಯದ ಸಮಗ್ರ ಅಭಿವೃದ್ದಿಗೆ ನಾವಿದ್ದೇವೆ ಎಂದು ತಿಳಿಸಿದರು.
ರೈತರ ಮುಗ್ದತೆ, ಪ್ರಾಮಾಣಿಕತೆ ಜೊತೆಗೆ ಚೆಲ್ಲಾಟವಾಡಲು ಬಂದಿಲ್ಲ, ಅವರ ಪ್ರಾಮಾಣಿಕತೆಗೆ ಗೌರವ ಕೊಡುತ್ತೇವೆ ಎಂದು ಕುಮಾರಸ್ವಾಮಿ ಇದೇ ವೇಳೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com