ಮಂಡ್ಯ, ತುಮಕೂರು ಕ್ಷೇತ್ರ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದೇಕೆ? ಎಂಬ ಪ್ರತಿಕ್ಷಾ ಎಂಬುವರ ಟ್ವೀಟ್ ಪ್ರಶ್ನೆಗೆ ಉತ್ತರಿಸಿದ ಅವರು, ಮೈಸೂರು ಅಥವಾ ತುಮಕೂರು ಕ್ಷೇತ್ರದಲ್ಲಿ ಒಂದನ್ನು ಬಿಟ್ಟುಕೊಡಿ ಎಂಬ ಬೇಡಿಕೆಯಿತ್ತು. ಮೈಸೂರಿನಲ್ಲಿ ಪಕ್ಷಕ್ಕೆ ಹೆಚ್ಚು ಶಕ್ತಿ ಇದೆ. ಹೀಗಾಗಿ ತುಮಕೂರು ಕ್ಷೇತ್ರ ಬಿಟ್ಟು ಕೊಟ್ಟಿದ್ದೇವೆ. ಮಂಡ್ಯದಲ್ಲಿ ಹಾಲಿ ಜೆಡಿಎಸ್ ಸಂಸದರು ಇದ್ದರು,ಹಾಗಾಗಿ ಅವರಿಗೆ ಬಿಟ್ಟುಕೊಟ್ಟಿದ್ದೇವೆ. ಮಂಡ್ಯ, ತುಮಕೂರು ಕ್ಷೇತ್ರಗಳಲ್ಲಿ ಪಕ್ಷದ ನಾಯಕರಿಗೆ ಅಸಮಧಾನ ಇರುವುದು ಸತ್ಯ. ಅದನ್ನು ಆದಷ್ಟು ಬೇಗ ಬಗೆಹರಿಸಿಕೊಳ್ಳುತ್ತೇವೆ ಎಂದರು.