ದಾವಣಗೆರೆ ಕ್ಷೇತ್ರದಿಂದ 87 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನಿಂದ ಕೊಟ್ಟಾಗ ಅಚ್ಚರಿಯಾಗಿತ್ತು. 2014ರ ಲೋಕಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಅವರ ಮಗ ಮಲ್ಲಿಕಾರ್ಜುನ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಕೂಡ ಅವರು ಟಿಕೆಟ್ ನಿರೀಕ್ಷೆಯಲ್ಲಿದ್ದರು. ತಮಗೆ ವಯಸ್ಸಾಯಿತು, ಪ್ರಚಾರದಲ್ಲಿ ತೊಡಗಲು ಸಾಧ್ಯವಿಲ್ಲ, ಬೇರೆ ಯಾರಿಗಾದರೂ ಈ ಬಾರಿ ಕೊಡಿ ಎಂದು ಹಿಂದೆ ಶಾಮನೂರು ಶಿವಶಂಕರಪ್ಪ ರಾಜ್ಯ ನಾಯಕರಿಗೆ ಹೇಳಿದ್ದರು.