ಈ ವೇಳೆ ಮಾತನಾಡಿದ ದಿನೇಶ್ ಗುಂಡೂರಾವ್, ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಗೆಲ್ಲಿಸಲು ಯೋಗಾ ರಮೇಶ್ ಕಾಂಗ್ರೆಸ್ ಸೇರಿದ್ದಾರೆ. ಸ್ವಾರ್ಥಕ್ಕಾಗಿ ವೈಯಕ್ತಿಕ ಲಾಭಕ್ಕಾಗಿ ಎ.ಮಂಜು ಬಿಜೆಪಿ ಸೇರಿದ್ದಾರೆ. ನಿಜವಾಗಿಯೂ ಅವರು ಬಿಜೆಪಿಗೆ ಏಕೆ ಸೇರಿದ್ದು ಎಂಬುದು ಇದುವರೆಗೆ ತಮಗೆ ಗೊತ್ತಿಲ್ಲ. ಮುಂದೊಂದು ದಿನ ಅವರು ಬಿಜೆಪಿಯಿಂದ ಬೇಸತ್ತು ಮತ್ತೆ ಕಾಂಗ್ರೆಸ್ ಗೆ ವಾಪಸಾಗುತ್ತಾರೆ. ಆದರೆ ಅವರಿಗೆ ಕಾಂಗ್ರೆಸ್ ಕದ ಶಾಶ್ವತವಾಗಿ ಮುಚ್ಚಿದೆ ಎಂದರು.