ಭಾರೀ ವಿರೋಧದ ನಡುವೆ ದೇವೇಗೌಡರ ಪರ ತುಮಕೂರಿನಲ್ಲಿ ಡಿಸಿಎಂ ಪರಮೇಶ್ವರ್ ಪ್ರಚಾರ!

ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಸಮ್ಮಿಶ್ರ ಸರ್ಕಾರದ ಮೈತ್ರಿ ಅಭ್ಯರ್ಥಿ ಎಚ್.ಡಿ ದೇವೇಗೌಡ ಅವರ ಪರವಾಗಿ ಪ್ರಚಾರ ಮಾಡಲು ಡಿಸಿಎಂ ...
ರಮೇಶ್ವರ್
ರಮೇಶ್ವರ್
ತುಮಕೂರು: ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಸಮ್ಮಿಶ್ರ ಸರ್ಕಾರದ ಮೈತ್ರಿ ಅಭ್ಯರ್ಥಿ  ಎಚ್.ಡಿ ದೇವೇಗೌಡ ಅವರ ಪರವಾಗಿ ಪ್ರಚಾರ ಮಾಡಲು ಡಿ,ಸಿಎಂ ಪರಮೇಶ್ವರ್ ನಿರ್ಧರಿಸಿದ್ದಾರೆ. 
ತುಮಕೂರಿನಲ್ಲಿ ಬಂಡಾಯ ಅಭ್ಯರ್ಥಿಯಾಗಿ ದೇವೇಗೌಡರ ವಿರುದ್ಧ ಸಂಸದ ಮುದ್ದ ಎಸ್ ಪಿ ಮುದ್ದ ಹನುಮೇಗೌಡ ಕಣಕ್ಕಿಳಿದಿದ್ದಾರೆ, ಪಕ್ಷದ ಟಿಕೆಟ್ ಸಿಗದಿದ್ದಕ್ಕೆ ಮಾಜಿ ಶಾಸಕ ಕೆ.ಎನ್ ರಾಜಣ್ಣ ಬಂಡಾಯವಾಗಿ ಸ್ಪರ್ಧಿಸಿದ್ದಾರೆ.
ದೇವೇಗೌಡರ ಪರ ಪ್ರಚಾರ ಮಾಡುವ ಸಂಬಂಧ ಎರಡು ಪಕ್ಷಗಳು ಸಭೆ ನಡೆಸಿದ್ದು, ಪರಮೇಶ್ವರ್ ಮತ್ತು ಸಚಿವ ಎಸ್.ಆರ್ ಶ್ರೀನಿವಾಸ್ ತುಮಕೂರಿನ ಎಲ್ಲಾ 8 ಕ್ಷೇತ್ರಗಳಲ್ಲೂ ಎರಡು ಪಕ್ಷದ ಕಾರ್ಯಕರ್ತರು ಸಭೆ ನಡೆಸಲು ನಿರ್ಧರಿಸಿದ್ದಾರೆ, ಎಪ್ರಿಲ್ 1 ರಿಂದ ಎರಡು ಪಕ್ಷದ ಕಾರ್ಯಕರ್ತರು ಒಟ್ಟಾಗಿ ಪ್ರಚಾರ ಕೈಗೊಳ್ಳಲಿದ್ದಾರೆ, ದೇವೇಗೌಡರು ಪ್ರಚಾರಕ್ಕೆ ಬಂದಾಗ ಯಾವುದೇ ರೀತಿಯ ಮುಜುಗರ ಉಂಟಾಗದಂತೆ ತಡೆಯಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗುತ್ತಿದೆ.
ಏಪ್ರಿಲ್4 ಮತ್ತು 5 ರಂದು ದೇವೇಗೌಡರು ತುಮಕೂರಿನ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ, ದೇವೇಗೌಡರು ಬೇರೆ ಎಲ್ಲಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡಬೇಕಾಗಿರುವುದರಿಂದ ತುಮಕೂರಿನಲ್ಲಿ ಶೇ.50 ರಷ್ಟು ಮಾತ್ರ ಸಮಯ ಕಳೆಯಲಿದ್ದಾರೆ, ಉಳಿದ ಎಲ್ಲಾ ಪ್ರಚಾರವನ್ನು ಪರಮೇಶ್ವರ್ ಮತ್ತು ಎಸ್ ಆರ್ ಶ್ರೀನಿವಾಸ್ ಮಾಡಲಿದ್ದಾರೆ ಎಂದು ಮಾಜಿ ಎಂಎಲ್ ಸಿ ರಮೇಶ್ ಬಾಬು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com