ಡಾಲರ್ಸ್ ಕಾಲೋನಿಯ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಉತ್ತರ ಕ್ಷೇತ್ರದ ಚುನಾವಣಾ ಸಭೆಯಲ್ಲಿ ದೇವೇಗೌಡರು ದಕ್ಷಿಣದಲ್ಲಿ ಬಿಜೆಪಿ ತಲೆ ಎತ್ತಲು ಬಿಡುವುದಿಲ್ಲ ಎಂಬ ಹೇಳಿಕೆ ಕೊಟ್ಟಿದ್ದಾರೆ. ನೀವು ನಿಮ್ಮ ಕುಟುಂಬ ಮಕ್ಕಳು, ಮೊಮ್ಮಕ್ಕಳಿಗೆ ಆದ್ಯತೆ ಕೊಟ್ಟಿದ್ದೀರಿ. ಇಡೀ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಒಡಕಿಗೆ ನೀವೇ ಕಾರಣರಾಗಿದ್ದೀರಿ, ತುಮಕೂರಿನಲ್ಲಿ ಕೈಕಾಲು ಕಟ್ಟಿ ಅಲ್ಲಿನ ಅಭ್ಯರ್ಥಿ ಮುದ್ದ ಹನುಮೇಗೌಡ ಅವರ ನಾಮಪತ್ರ ವಾಪಸ್ ತಗೆದುಕೊಳ್ಳುವಂತೆ ಮಾಡಿರುವ ನೀವು ಮೊದಲು ತುಮಕೂರಲ್ಲಿ ಗೆದ್ದು ಬನ್ನಿ.ಆ ಮೇಲೆ ಪೌರುಷದ ಮಾತಾಡಿ ಎಂದು ದೇವೇಗೌಡರಿಗೆ ಸವಾಲು ಹಾಕಿದರು.