ಇದೇ ವೇಳೆ ಮಾತನಾಡಿದ ರಾಯಸಂದ್ರ ರವಿ, ಪಕ್ಷದ ಉಳಿವಿಗಾಗಿ, ನಾಯಕರ ಮಾತನ್ನು ನಂಬಿ ಮುದ್ದಹನುಮೇಗೌಡ ನಾಮಪತ್ರ ವಾಪಸ್ಸು ಪಡೆದಿದ್ದಾರೆ. ಅವರಿಗೆ ಚುನಾವಣೆಯಲ್ಲಿ ಮುಂಚೂಣಿ ಸ್ಥಾನಮಾನ ನೀಡಬೇಕು. ಹಾಗಾದರೆ ಮಾತ್ರ ಕಾರ್ಯಕರ್ತರು ಮತ್ತು ನಾಯಕರು ಶ್ರಮಿಸುತ್ತಾರೆ. ಇಲ್ಲವಾದರೆ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂಬ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.