ಸುಮಲತಾ ಅಂಬರೀಶ್ ಅವರ ಚುನಾವಣಾ ಏಜೆಂಟ್ ಮದನ್ ಕುಮಾರ್ ಮಾತನಾಡಿ, ನಾಮಪತ್ರ ಸಲ್ಲಿಕೆ ವೇಳೆ ಆಕ್ಷೇಪ ಸಲ್ಲಿಕೆ ಮಾಡಲು ಕಾನೂನಿನಲ್ಲಿಯೇ ಅವಕಾಶವಿದೆ. ಆ ಪ್ರಕಾರ ನಿಖಿಲ್ ಕುಮಾರಸ್ವಾಮಿ ಅವರ ಅಫಿಡವಿಟ್ ಫಾರ್ಮಾಟ್ ಪ್ರಕಾರ ಇರಲಿಲ್ಲ. ಹೀಗಾಗಿ, ನಾವು ಆಕ್ಷೇಪ ಸಲ್ಲಿಸಿದ್ದೆವು. ಆದರೆ, ಅವರು ಅದನ್ನು ಲಿಖಿತ ರೂಪದಲ್ಲಿ ಆಕ್ಷೇಪ ಸಲ್ಲಿಸಬೇಕೆಂದು ಹೇಳಿದ್ದರು. ಆ ರೀತಿ ನಾವು ದೂರು ನೀಡಿದ್ದೆವು. ಆದರೆ, ಜಿಲ್ಲಾಧಿಕಾರಿ ನಿಖಿಲ್ ಅರ್ಜಿಯನ್ನು ಅಪ್ರೂವ್ ಮಾಡಲಾಗಿದೆ ಎಂದು ಹೇಳಿದರು. ರಾತ್ರಿಯ ವೇಳೆ 'ನಿಮ್ಮಿಂದ ಯಾವುದೇ ಆಕ್ಷೇಪಣೆಗಳು ಬಂದಿಲ್ಲ' ಎಂದು ಚುನಾವಣಾಧಿಕಾರಿ ನನಗೆ ಮರುಉತ್ತರ ಬರೆದಿದ್ದಾರೆ. ಹೀಗೆ ಜಿಲ್ಲಾಧಿಕಾರಿ ಮಂಜುಶ್ರೀ ಅವರು ಕಾನೂನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.