ಅವರೆಲ್ಲಾ ಪ್ರಬಲ ಅಭ್ಯರ್ಥಿಗಳಲ್ಲಾ, ಆದರೂ ಮತಗಳು ವಿಭಜನೆಯಾಗುವ ಭಯ ಕಾಂಗ್ರೆಸ್ ಗೆ ಕಾಡುತ್ತಿದೆ, ಕಳೆದ ಬಾರಿ 600 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದರು, ಹೀಗಾಗಿ ಚಾನ್ಸ್ ತೆಗೆದುಕೊಳ್ಳಲು ಕಾಂಗ್ರೆಸ್ ತಯಾರಿಲ್ಲ, ಹೀಗಾಗಿ ಜಿಲ್ಲಾ ಮತ್ತು ರಾಜ್ಯ ನಾಯಕರು ಅಸಮಾಧಾನ ಸರಿಪಡಿಸಲು ಇನ್ನಿಲ್ಲದ ಹರಸಾಹಸ ಮಾಡುತ್ತಿದ್ದಾರೆ. ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮನವೊಲಿಸಲು ಮುಂದಾಗಿದ್ದಾರೆ.