ಸುಮಲತಾ ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ್ದರು. ಆದರೆ ಅವರಿಗೆ ಟಿಕೆಟ್ ಕೊಟ್ಟಿಲ್ಲ, ಅವರ ಪರ ಕೆಲಸ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡರು ನಮಗೆ ಸೂಚಿಸಿದ್ದರು. ನಾವ್ಯಾರು ಅವರ ಪರ ಪ್ರಚಾರ ನಡೆಸಿಲ್ಲ, ಸ್ಥಳೀಯವಾಗಿ ನಾವು ಯಾರದ್ದೋ ಮನೆಯ ಕಾರ್ಯಕ್ರಮಕ್ಕೆ ಹೋಗಿದ್ದೇವೆ ಅಷ್ಟೆ, ಸಭೆ ಸಮಾರಂಭ ನಡೆಸಿ ನಾವ್ಯಾರೂ ಪ್ರಚಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಆಪ್ತರು ಸಿಕ್ಕಾಗ ನಿಮಗೆ ಇಷ್ಟ ಬಂದ ಹಾಗೆ ಮಾಡಿ ಅಂದಿದ್ದೇವೆ, ಅದೆಲ್ಲಾ ಪ್ರಚಾರ ಅಲ್ಲ, ಈ ಚುನಾವಣೆಯನ್ನು ಮಂಡ್ಯ ಜನತೆಗೆ ಬಿಟ್ಟುಬಿಡೋಣ ಎಂದು ಚಲುವರಾಯಸ್ವಾಮಿ ಹೇಳಿದರು.