ನಾನಾಗಿ ಜೆಡಿಎಸ್ ಅನ್ನು ಬಿಡಲಿಲ್ಲ, ಅವರಾಗೇ ನನ್ನನ್ನು ಓಡಿಸಿದರು: ಸಿದ್ದರಾಮಯ್ಯ

ನಾನಾಗಿ ಜೆಡಿಎಸ್ ಅನ್ನು ಬಿಡಲಿಲ್ಲ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರೇ ನನ್ನನ್ನು ಪಕ್ಷದಿಂದ ಹೊರ ಹಾಕಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
ಕಲಬುರಗಿ: ನಾನಾಗಿ ಜೆಡಿಎಸ್ ಅನ್ನು ಬಿಡಲಿಲ್ಲ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರೇ ನನ್ನನ್ನು ಪಕ್ಷದಿಂದ ಹೊರ ಹಾಕಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಾನು ಜೆಡಿಎಸ್ ಬಿಟ್ಟದ್ದು ಯಾಕೆ ಎಂದು ಬಿಜೆಪಿಯ ಮಾಜಿ ಡಿಸಿಎಂ ಆರ್ ಅಶೋಕ್ ಕೇಳುತ್ತಿದ್ದಾರೆ. ನಾನು ಜೆಡಿಎಸ್ ಬಿಟ್ಟಿರಲಿಲ್ಲ. ಅಹಿಂದ ಚಟುವಟಿಕೆಯಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ದೇವೇಗೌಡ ಅವರೇ ನನ್ನನ್ನು ಉಚ್ಛಾಟನೆ ಮಾಡಿದ್ದರು. ಡಾ. ಉಮೇಶ್ ಜಾದವ್ ಪಕ್ಷ ಬಿಟ್ಟಿರುವುದಕ್ಕೂ ನಾನು ಜೆಡಿಎಸ್ ಬಿಟ್ಟಿರೋದಕ್ಕೂ ವ್ಯತ್ಯಾಸವಿದೆ ಎಂದು ಕಲಬುರಗಿಯಲ್ಲಿ ಸಿದ್ದರಾಮಯ್ಯ ಹೇಳಿದರು. 
ಇತ್ತೀಚೆಗೆ ಆರ್ ಅಶೋಕ್ ಚಿಂಚೋಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಉಮೇಶ್ ಜಾಧವ್ ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ. ಹಣ ಪಡೆದು ಪಕ್ಷ ಬಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದಾರೆ. ಹಾಗಾದರೆ ಈ ಹಿಂದೆ ಸಿದ್ದರಾಮಯ್ಯ ಅವರು ಕೂಡ ಜೆಡಿಎಸ್ ಪಕ್ಷದಿಂದ ಹಣ ಪಡೆದು ಪಕ್ಷ ಬಿಟ್ಟಿದ್ದಾರಾ ಎಂದು ಪ್ರಶ್ನಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com