''ರಾಜ್ಯದಲ್ಲಿ ಕಾಂಗ್ರೆಸ್ನ ವೈಫಲ್ಯಕ್ಕೆ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಅವರೇ ಕಾರಣ. ರಾಜ್ಯದಲ್ಲಿ ಪಕ್ಷದ ಪ್ರಚಾರ ವೈಖರಿ ನೋಡಿದಾಗಲೇ ಇದೊಂದು ಪ್ಲಾಪ್ ಶೋ ಎನ್ನುವುದು ಗೊತ್ತಾಗಿತ್ತು. ಆದರೆ, ಪಕ್ಷದ ನಾಯಕರು ಭ್ರಮೆಯಲ್ಲಿದ್ದರು. ಈಗಲಾದರೂ ಅವರು ನೆಲದ ಮೇಲೆ ನಿಂತುಕೊಂಡು ವಾಸ್ತವವನ್ನು ಅರಿತುಕೊಳ್ಳಲಿ ಎಂದು ಲೇವಡಿ ಮಾಡಿದ್ದಾರೆ.