ಇದಕ್ಕೆ ಮುನ್ನ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದ ರೋಷನ್ ಬೇಗ್ ಈ ಚುನಾವಣೆಯಲ್ಲಿ ಸೋಲಾದರೆ ಅದಕ್ಕೆ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹಾಗೂ ವೇಣುಗೋಪಾಲ್ ನೇರ ಹೊಣೆ ಎಂದು ಹೇಳಿದ್ದರು. ಅಲ್ಲದೆ ಎಕ್ಸಿಟ್ ಪೋಲ್ ನೋಡಿದರೆ ನನಗೆ ಬೇಸರವಾಗುತ್ತದೆ ಎಂದು ಬಹಿರಂಗವಾಗಿ ತಮ್ಮ ಪಕ್ಷದ ನಾಯಕರ ವಿರುದ್ಧವೇ ಅಸಮಧಾನ ವ್ಯಕ್ತಪಡಿಸಿದ್ದರು.