ಹಾಸನ, ಮಂಡ್ಯ ಮತ್ತು ತುಮಕೂರು ಮೂರೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ವಿಶ್ವಾಸ ಹೊಂದಿದ್ದರೆ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಮಂಡ್ಯದಲ್ಲಿ ಕೈಕೊಡುವ ಸಾಧ್ಯತೆಯಿದೆ. ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ ಉಮೇಶ್ ಜಾಧವ್ ನಡುವೆ ತೀವ್ರ ಪೈಪೋಟಿಯಿದೆ.ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಮತ್ತು ಬಿಜೆಪಿಯ ಬಚ್ಚೇಗೌಡ ಮಧ್ಯೆ ಪೈಪೋಟಿ ಏರ್ಪಟ್ಟಿದೆ.