ಮೇ 29ರಂದು ಮಂಡ್ಯದಲ್ಲಿ ಸ್ವಾಭಿಮಾನದ ವಿಜಯೋತ್ಸವ: ಸುಮಲತಾ ಅಂಬರೀಶ್

ಮೇ 29ರಂದು ನಟ, ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಅಂದು ಮಂಡ್ಯದಲ್ಲಿ ಅವರ ಅಭಿಮಾನಿಗಳ ಸಮ್ಮುಖದಲ್ಲಿ ಸ್ವಾಭಿಮಾನದ ವಿಜಯೋತ್ಸವ ಆಚರಿಸಲಾಗುವುದು ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.
ಸುಮಲತಾ ಅಂಬರೀಷ್
ಸುಮಲತಾ ಅಂಬರೀಷ್
ಬೆಂಗಳೂರು: ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ, ಮೊದಲ ಪ್ರಯತ್ನದಲ್ಲಿಯೇ ಸಂಸತ್ ಮೆಟ್ಟಿಲೇರುತ್ತಿರುವ ನಟಿ ಸುಮಲತಾ, “ಸ್ವತಂತ್ರ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಮಂಡ್ಯದ ಜನತೆ ಸ್ವಾಭಿಮಾನಕ್ಕೆ ತಲೆಬಾಗಿದ್ದಾರೆ. ಇತಿಹಾಸ ನಿರ್ಮಿಸಿರುವುದು ಕ್ಷೇತ್ರದ ಜನರೇ ಹೊರತು ನಾನಲ್ಲ” ಎಂದು ಹೇಳಿದ್ದಾರೆ.
ಮಾಜಿ ಸಚಿವ ದಿವಂಗತ ಅಂಬರೀಶ್ ಅವರ 6ನೇ ಪುಣ್ಯತಿಥಿ ಅಂಗವಾಗಿ ಕಂಠೀರಣ ಸ್ಟುಡಿಯೋದಲ್ಲಿನ ಅವರ ಸಮಾಧಿಯ ದರ್ಶನ ಪಡೆದ ಸುಮಲತಾ,ಲೋಕಸಭಾ ಕ್ಷೇತ್ರದ ಗೆಲುವಿನ ಪ್ರಮಾಣ ಪತ್ರವನ್ನು ಸಮಾಧಿಗೆ ಅರ್ಪಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com