ಬಿಜೆಪಿ ಎಷ್ಟು ಸೀಟು ಪಡೆದಿದೆ ಎಂಬುದು ಮುಖ್ಯವಲ್ಲ, ಆದರೆ ಗೆದ್ದ ಪರಿ ಎಂತದ್ದು ಎಂಬುದೇ ಮುಖ್ಯ, ಫಲಿತಾಂಶ ರಾಜ್ಯ ಸಮ್ಮಿಶ್ರ ಸರ್ಕಾರದ ಮೇಲೆ ಪರಿಣಾಮ ಬೀರಲಿದೆ, ಅನಂತ್ ಕುಮಾರ್ ಹೆಗೆಡೆ, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಮಂಡ್ಯದಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಗೆಲ್ಲಿಸಲು ಸಿಎಂ ಕುಮಾರಸ್ವಾಮಿ ತಮ್ಮ ಎಲ್ಲಾ ಸಮಯ ಅಲ್ಲೇ ಕಳೆದರು, ಆದರೆ ಐವತ್ತು ವರ್ಷಗಳ ಇತಿಹಾಸ ಮುರಿದಿರುವ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಸುಮಾರು 1,25,876 ಮತಗಳ ಅಂತರದಿಂದ ಗೆದ್ದಿದ್ದಾರೆ. ಈ ವಿಷಯ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಮೂಡಿಸುವ ಸಾಧ್ಯತೆಯಿದೆ.