ನಾವು ಮೈತ್ರಿ ಸರ್ಕಾರವನ್ನು ಕೆಡವುವ ಅಗತ್ಯವಿಲ್ಲ. ಅದಾಗಿಯೇ ಬೀಳುತ್ತದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಸಂಜೆಯೊಳಗಾಗಿ ಸ್ವಯಂ ಪ್ರೇರಿತರಾಗಿ ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು. ಇದು ಅವರಿಗೆ ಒಳ್ಳೆಯದು. ಇದರಿಂದ ರಾಜ್ಯದ ಜನರಿಗೆ ಉತ್ತಮ ಸಂದೇಶ ಹೋಗುತ್ತದೆ ಎಂದು ಹೇಳಿದರು.ಕಾಂಗ್ರೆಸ್ ನಿಂದ ನಮ್ಮ ಹಲವಾರು ಸ್ನೇಹಿತರು ಬಿಜೆಪಿಗೆ ಬರುತ್ತಾರೆ ಎಂದು ಅವರು ಇದೇ ವೇಳೆ ಹೇಳಿದರು.