ಚೆನ್ನೈ: ತಮಿಳುನಾಡು ಮತ್ತು ಪುದುಚೇರಿಯ 3 ಲೋಕಸಭೆ ಸ್ಥಾನಗಳಲ್ಲಿ ಪಕ್ಷ ಗೆಲವು ಸಾಧಿಸಲು ವಿಫಲವಾದ ಹಿನ್ನೆಲೆಯಲ್ಲಿ ಎಐಎಡಿಎಂಕೆ ನಾಯಕಿ ಜಯಲಲಿತಾ ಮೂವರು ಸಚಿವರು, 6 ಮಂದಿ ಜಿಲ್ಲಾ ನಾಯಕರನ್ನು ವಜಾ ಮಾಡಿದ್ದಾರೆ. ಕಂದಾಯ, ಕೃಷಿ ಮತ್ತು ಕಾರ್ಮಿಕ ಸಚಿವರನ್ನು ವಜಾ ಮಾಡಿ, ಅವರ ಸ್ಥಾನಗಳಿಗೆ ಬೇರೆಯವರನ್ನು ನೇಮಕ ಮಾಡಲಿದ್ದಾರೆ. ಮಂಗಳವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಡಿಎಂಕೆ ಪಕ್ಷವು 40ರಲ್ಲಿ 37 ಸ್ಥಾನಗಳನ್ನು ಗೆದ್ದಿತ್ತು.
Advertisement