ಬಾಳೆಹಣ್ಣಿನ ಸಿಪ್ಪೆ ತೆಗೆದು ಸಣ್ಣ ಪಾತ್ರೆಯೊಂದರಲ್ಲಿ ಹಾಕಿ ಚೆನ್ನಾಗಿ ಪೇಸ್ಟ್ ಮಾಡಿಕೊಳ್ಳಬೇಕು.
ಬಳಿಕ ಇದಕ್ಕೆ ಮೊಸರು, ಸಕ್ಕರೆ, ಸೋಡಾ, ಉಪ್ಪು, ಜೀರಿಗೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು.
ನಂತರ ಮೈದಾಹಿಟ್ಟು ಹಾಗಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ ಹಿಟ್ಟು ತಯಾರು ಮಾಡಿಕೊಳ್ಳಬೇಕು. ಬಳಿಕ ಕಲಸಿದ ಹಿಟ್ಟು 8-10 ಗಂಟೆಗಳ ಕಾಲ ನೆನೆಯಲು ಬಿಡಬೇಕು.
ಒಲೆಯ ಮೇಲೆ ಬಾಣಲೆ ಇಟ್ಟು ಎಣ್ಣೆಯನ್ನು ಹಾಕಿ ಕಾಯಲು ಬಿಡಬೇಕು. ನಿಂಬೆಹಣ್ಣಿನ ಗಾತ್ರಕ್ಕೆ ಹಿಟ್ಟನ್ನು ಉಂಡೆ ಮಾಡಿ ಪೂರಿಯಂತೆ ಲಟ್ಟಿಸಿಕೊಳ್ಳಬೇಕು. ಕಾದ ಎಣ್ಣೆಗೆ ಈ ಲಟ್ಟಿಸಿಕೊಂಡ ಬನ್ಸ್ ನ್ನು ಹಾಕಿ ಎರಡೂ ಬದಿಯಲ್ಲಿ ಕಂದು ಬಣ್ಣ ಬರವವರೆಗೆ ಕರಿದು ತೆಗೆದರೆ ರುಚಿಕರವಾದಮಂಗಳೂರು ಬನ್ಸ್ ಸವಿಯಲು ಸಿದ್ಧ.