ಮೊದಲಿಗೆ ಆಲೂಗಡ್ಡೆ ಸಿಪ್ಪೆ ತೆಗೆದು ಸಣ್ಣಗೆ ಕತ್ತರಿಸಿಕೊಂಡು ಬೇಯಿಸಿಕೊಳ್ಳಬೇಕು. ಸಂಪೂರ್ಣವಾಗಿ ನುಣ್ಣಗೆ ಆಗದಂತೆ ಬೇಯಿಸಿಕೊಳ್ಳಬೇಕು.
ನಂತರ ಒಂದು ಪಾತ್ರೆಗೆ ಮೈದಾಹಿಟ್ಟು, ಜೋಳದ ಹಿಟ್ಟು, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಅಚ್ಚ ಖಾರದ ಪುಡಿ, ಉಪ್ಪು, ಎಣ್ಣೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.
ಒಲೆಯ ಮೇಲೆ ಬಾಣಲೆ ಇಟ್ಟು ಎಣ್ಣೆ ಕಾದ ನಂತರ ಮಿಶ್ರಣಕ್ಕೆ ಅಲೂಗಡ್ಡೆಗಳನ್ನು ಚೆನ್ನಾಗಿ ಅದ್ದಿ, ಎಣ್ಣೆಗೆ ಹಾಕಿ ಚಿನ್ನದ ಬಣ್ಣ ಬರುವವರೆಗೆ ಕರಿದುಕೊಳ್ಳಬೇಕು.
ನಂತರ ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಹಸಿಮೆಣಸಿನ ಕಾಯಿ, ಬೆಳ್ಳುಳ್ಳಿ, ಕ್ಯಾಪ್ಸಿಕಂ, ಈರುಳ್ಳಿ ಹಾಕಿ ಚೆನ್ನಾಗಿ ಹುರಿದುಕೊಳ್ಳಬೇಕು. ಬಳಿಕ ಸೋಯಾ ಸಾಸ್, ಟೊಮೆಟೋ ಸಾಸ್, ವಿನೆಗರ್, ಚಿಲ್ಲಿ ಸಾಸ್, ಉಪ್ಪು, ಕಾಳುಮೆಣಸಿನ ಪುಡಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು. ನಂತರ ಅರ್ಧ ಚಮಚದಷ್ಟು ಜೋಳದ ಹಿಟ್ಟಿಗೆ ನೀರು ಮಿಶ್ರಣ ಮಾಡಿಕೊಂಡು ಮಂಚೂರಿ ಮಸಾಲೆಗೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು. ನಂತರ ಈಗಾಗಲೇ ಎಣ್ಣೆಯಲ್ಲಿ ಕರಿದುಕೊಂಡ ಆಲೂಗಡ್ಡೆಗಳನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿದರೆ, ರುಚಿಕರವಾದ ಆಲೂ ಮಂಚೂರಿ ಸವಿಯಲು ಸಿದ್ಧ.