ಇಂಥದ್ದೊಂದು ಅಪರೂಪದ ಶಸ್ತ್ರಚಿಕಿತ್ಸೆ ಬೆಂಗಳೂರಿನ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ನಡೆದಿದ್ದು, 37 ವರ್ಷದ ಅಭಿಷೇಕ್ ಪ್ರಸಾದ್ ಶಸ್ತ್ರಚಿಕಿತ್ಸೆಗೊಳಗಾದ ವ್ಯಕ್ತಿಯಾಗಿದ್ದಾರೆ. ಗಿಟಾರ್ ನುಡಿಸುವ ಹವ್ಯಾಸ ಹೊಂದಿದ್ದ ಅಭಿಷೇಕ್ ಹೆಚ್ಚಿನ ಅಭ್ಯಾಸ ಮಾಡಿದ್ದರಿಂದ ಗಿಟಾರ್ ಡಿಸ್ಟೋನಿಯಾ, ಇದರಿಂದ ಬೆರಳುಗಳ ಚಲನೆಯಲ್ಲಿ ವ್ಯತ್ಯಯ ಉಂಟಾಗಿ ಗಿಟಾರ್ ನುಡಿಸಲು ಕಷ್ಟವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಅಭಿಷೇಕ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಶಸ್ತ್ರಚಿಕಿತ್ಸೆ ವೇಳೆ ಅವರು ಸಂಪೂರ್ಣ ಎಚ್ಚರವಾಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.