social_icon

ಪದೆಪದೇ ಬೆನ್ನು ನೋವು ಕಾಣಿಸಿಕೊಳ್ಳುತ್ತಿದೆಯೇ? ಹಾಗಿದ್ದರೆ ಏನು ಮಾಡಬೇಕು? ಇಲ್ಲಿದೆ ಪರಿಹಾರ...

ಬೆನ್ನು ನೋವು ಎಂಬುದು ಎಲ್ಲರಲ್ಲೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಇತ್ತೀಚೆಗೆ ಇದಕ್ಕೆ ವಯಸ್ಸಿನ ಅಂತರವೂ ಸಹ ಇಲ್ಲ. ಇದೇ ಸಮಸ್ಯೆ ಅನೇಕರನ್ನು ನಿರಂತರವಾಗಿ ಕಾಡುತ್ತಿರುತ್ತವೆ.

Published: 08th December 2022 12:06 PM  |   Last Updated: 08th December 2022 02:38 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆನ್ನು ನೋವು ಎಂಬುದು ಎಲ್ಲರಲ್ಲೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಇತ್ತೀಚೆಗೆ ಇದಕ್ಕೆ ವಯಸ್ಸಿನ ಅಂತರವೂ ಸಹ ಇಲ್ಲ. ಇದೇ ಸಮಸ್ಯೆ ಅನೇಕರನ್ನು ನಿರಂತರವಾಗಿ ಕಾಡುತ್ತಿರುತ್ತವೆ.

ಉತ್ತಮ ಗುಣಮಟ್ಟದ ಜೀವನ ನಡೆಸಲು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯು ಸಹಾಯ ಮಾಡುತ್ತದೆ. ಆದರೆ, ಅನೇಕರು ಶಸ್ತ್ರಚಿಕಿತ್ಸೆ ಎಂದಾಕ್ಷಣ ಭಯ ಪಡುತ್ತಾರೆ. ಪ್ರಮುಖವಾಗಿ ವಯಸ್ಸಾದವರಿಗೆ ಶಸ್ತ್ರಚಿಕಿತ್ಸೆಗೆ ವೈದ್ಯರು ಶಿಫಾರಸು ಮಾಡಿದಾಗಂತೂ ಹಲವು ಹಿಂಜರಿಯುವುದುಂಟು. ಇದಕ್ಕೆ ಕಾರಣ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗುವುದು ಗಾಲಿಕುರ್ಚಿಯ ಜೀವನಕ್ಕೆ ಕಾರಣವಾಗುತ್ತದೆ ಎಂಬ ತಪ್ಪು ಕಲ್ಪನೆ.

ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ ಬಗ್ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಬೆನ್ನುಹುರಿ ಶಸ್ತ್ರಚಿಕಿತ್ಸೆ ಸಮಾಲೋಚಕರು ಮಾತನಾಡಿದ್ದು, ಶಸ್ತ್ರಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆನ್ನುಮೂಳೆಯು ದೇಹದ ಬಹುಪಾಲು ತೂಕವನ್ನು ಹೊಂದಿದೆ, ಬೆನ್ನುಮೂಳೆ ಶಸ್ತ್ರಚಿಕಿತ್ಸೆಯು ಪ್ರಮುಖ ಶಸ್ತ್ರಚಿಕಿತ್ಸೆಯಾಗಿದ್ದರೂ ಈ ವರೆಗೂ ವೈದ್ಯರು ನಡೆಸಿರುವ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗಳಲ್ಲಿ ಸುಮಾರು 95 ಪ್ರತಿಶತ ಶಸ್ತ್ರಚಿಕಿತ್ಸೆಗಳು ಯಶಸ್ವಿಯಾಗಿದೆ. ಶಸ್ತ್ರಚಿಕಿತ್ಸೆಗೆ ಒಳಗಾದ ವಯಸ್ಸಾದ ಹೆಚ್ಚಿನ ಜನರು ಸುಧಾರಿತ ಚಲನಶೀಲತೆ ಮತ್ತು ನೋವಿಗೆ ಪರಿಹಾರವನ್ನು ಕಂಡುಕೊಂಡಿದ್ದಾರೆಂದು ಹೇಳಿದ್ದಾರೆ.

ವಯಸ್ಸಾದವರಿಗೆ ವೈದ್ಯರು ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಹೇಗೆ ಮಾಡುತ್ತಾರೆ?
ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ನಡೆಸಿದ ಶಸ್ತ್ರಚಿಕಿತ್ಸೆಯ ಪ್ರಕಾರವು ನಿರ್ದಿಷ್ಟ ಸ್ಥಿತಿ, ಸಮಸ್ಯೆಯ ಸ್ಥಳ ಮತ್ತು ರೋಗಿಯ ಒಟ್ಟಾರೆ ಆರೋಗ್ಯವನ್ನು ಅವಲಂಬಿಸಿರುತ್ತದೆ. ಇದು ರೋಗಿಯ ಮಾನಸಿಕ ಸ್ಥಿತಿಯನ್ನು ಕೂಡ ಅವಲಂಬಿಸಿರುತ್ತದೆ. ಶಸ್ತ್ರಚಿಕಿತ್ಸೆಗೂ ಮೊದಲು ಕಾರ್ಯವಿಧಾನದ ಪೂರ್ವ ಚರ್ಚೆ ಮತ್ತು ಯೋಜನೆಯನ್ನು ಅನುಸರಿಸಲಾಗುತ್ತದೆ.

ಇದನ್ನೂ ಓದಿ: ಬಿಡದೇ ಕಾಡುವ ಬೆನ್ನು ನೋವಿಗೆ ಆಯುರ್ವೆದ ಚಿಕಿತ್ಸೆ (ಕುಶಲವೇ ಕ್ಷೇಮವೇ)

ವಯಸ್ಸಾದವರಲ್ಲಿ ಬೆನ್ನುಮೂಳೆಯು ದುರ್ಬಲವಾಗಿರುತ್ತದೆ, ಆದ್ದರಿಂದ ಬೆನ್ನುಮೂಳೆಯನ್ನು ಸ್ಥಿರಗೊಳಿಸುವುದು ಹೆಚ್ಚು ಮುಖ್ಯವಾಗುತ್ತದೆ. ಬೆನ್ನುಮೂಳೆಯನ್ನು ಬಲಪಡಿಸಲು ಮತ್ತು ಸಮಸ್ಯೆಯನ್ನು ಸರಿಪಡಿಸಲು, ಶಸ್ತ್ರಚಿಕಿತ್ಸೆಯು ತಿರುಪುಮೊಳೆಗಳು ಮತ್ತು ರಾಡ್ಗಳನ್ನು ಇರಿಸುವುದನ್ನು ಒಳಗೊಂಡಿರುತ್ತದೆ.

ಲ್ಯಾಮಿನೆಕ್ಟಮಿ ಎನ್ನುವುದು ಬೆನ್ನುಹುರಿ ಅಥವಾ ನರಗಳ ಒತ್ತಡವನ್ನು ಬೆನ್ನುಮೂಳೆಯ ಮೂಳೆಯ ಭಾಗವನ್ನು ತೆಗೆದುಹಾಕುವ ಮೂಲಕ ಬಿಡುಗಡೆ ಮಾಡುವ ಅತ್ಯಂತ ಸಾಮಾನ್ಯವಾದ ಶಸ್ತ್ರಚಿಕಿತ್ಸೆಯಾಗಿದೆ. ಇತರ ಶಸ್ತ್ರಚಿಕಿತ್ಸಾ ವಿಧಾನಗಳಲ್ಲಿ ಡಿಸೆಕ್ಟಮಿ, ವರ್ಟೆಬ್ರೊಪ್ಲ್ಯಾಸ್ಟಿ ಮತ್ತು ಬೆನ್ನುಮೂಳೆಯ ಸಮ್ಮಿಳನ ಸೇರಿವೆ.

ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯು ಯಾವಾಗಲೂ ಬಹುಶಿಸ್ತೀಯ ತಂಡವನ್ನು ಒಳಗೊಂಡಿರುತ್ತದೆ, ಐಸಿಯು ಆರೈಕೆ ಮತ್ತು ನಿರ್ವಹಣಾ ತಂತ್ರಜ್ಞಾನದ ಗುಣಮಟ್ಟದ ಆರೈಕೆಯ ಮೇಲೆ ಅವಲಂಬಿತವಾಗಿದೆ. ಆರೋಗ್ಯ ರಕ್ಷಣೆಯಲ್ಲಿ ತಂತ್ರಜ್ಞಾನವು ಮುಂದುವರೆದಂತೆ, ಶಸ್ತ್ರಚಿಕಿತ್ಸಕರು ಎಂಡೋಸ್ಕೋಪಿಕ್ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯಂತಹ ಕನಿಷ್ಠ ವಿಧಾನಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ.

ನೈಜ-ಸಮಯದ ಬೆನ್ನುಹುರಿಯ ಮೇಲ್ವಿಚಾರಣೆಯು ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಉದ್ಭವಿಸಬಹುದಾದ ಯಾವುದೇ ಸಮಸ್ಯೆಯನ್ನು ಸರಿಪಡಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ದೀರ್ಘಕಾಲಿಕ ರೋಗ ಪರಿಸ್ಥಿತಿಗಳನ್ನು ಹೊಂದಿರುವ ರೋಗಿಗಳಿಗೆ ತ್ವರಿತವಾಗಿ ಮತ್ತು ಉತ್ತಮ ವೀಕ್ಷಣೆಯಲ್ಲಿ ಚಿಕಿತ್ಸೆ ನೀಡಬಹುದು.

ವಯಸ್ಸಾದವರಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯಲ್ಲಿ ಎದುರಾಗುವ ಸವಾಲುಗಳು ಯಾವುವು?
ವಯಸ್ಸಾದ ರೋಗಿಗಳಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸುವುದು ಅನೇಕ ಸಮಸ್ಯೆಗಳನ್ನು ಎದುರು ಮಾಡುತ್ತದೆ. ಮಧುಮೇಹ, ಅಧಿಕ ರಕ್ತದೊತ್ತಡ, ಕೆಲವರಲ್ಲಿ ಕ್ಯಾನ್ಸರ್‌, ಕಡಿಮೆ ರೋಗನಿರೋಧಕ ಶಕ್ತಿ ಮತ್ತು ಆಸ್ಟಿಯೊಪೊರೋಸಿಸ್‌ನಂತಹ ಕಾಯಿಲೆಗಳನ್ನು ಹೊಂದಿರುತ್ತಾರೆ. ಶಸ್ತ್ರಚಿಕಿತ್ಸೆಯನ್ನು ಸಂಕೀರ್ಣಗೊಳಿಸಬಹುದಾದ ಈ ಪರಿಸ್ಥಿತಿಗಳಿಂದಾಗಿ, ಸೋಂಕುಗಳು, ರಕ್ತಸ್ರಾವ ಮತ್ತು ರಕ್ತ ಹೆಪ್ಪುಗಟ್ಟುವಿಕೆಯ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಹೀಗಾಗಿಯೇ ಅವರು ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲು ಹಿಂಜರಿಯುತ್ತಾರೆ.

ಇದನ್ನೂ ಓದಿ: ಔಷಧಿ ಇಲ್ಲದೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸೇವಿಸಬೇಕಾದ ಅತ್ಯುತ್ತಮ ಆಹಾರಗಳು ಇಲ್ಲಿವೆ...

ವಯಸ್ಸಾದವರಿಗೆ ಶಸ್ತ್ರಚಿಕಿತ್ಸೆಯ ನಂತರ ಹೆಚ್ಚಿನ ಪುನರ್ವಸತಿ ಅಗತ್ಯವಿರುತ್ತದೆ ಮತ್ತು ದೀರ್ಘವಾದ ಚೇತರಿಕೆಯ ಸಮಯದ ಅಗತ್ಯವಿರುತ್ತದೆ. ಈ ಅಡೆತಡೆಗಳ ಹೊರತಾಗಿಯೂ, ವಯಸ್ಸಾದವರಿಗೆ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ ಸಾಕಷ್ಟು ತಯಾರಿಗಳೊಂದಿಗೆ ಯಶಸ್ವಿಯಾಗಿ ಮಾಡಬಹುದು ಎಂದು ತಿಳಿಸಿದ್ದಾರೆ.

ಬೆನ್ನುಮೂಳೆಯ ಸಮಸ್ಯೆಗಳನ್ನು ತಡೆಯಬಹುದೇ?
ಪ್ರೌಢಾವಸ್ಥೆಯಲ್ಲಿ ಆರೋಗ್ಯಕರ ಜೀವನಶೈಲಿಯನ್ನು ನಡೆಸುವ ಮೂಲಕ ಬೆನ್ನುಮೂಳೆಯ ಸಮಸ್ಯೆಗಳನ್ನು ದೂರಾಗಿಸಬಹುದು. ವಯಸ್ಸಾದ ಜನರು ಸಮತೋಲಿತ ಆಹಾರವನ್ನು ತಿನ್ನುವುದು ಮತ್ತು ಎಷ್ಟು ಸಾಧ್ಯವೋ ಅಷ್ಟು ನಡೆಯುವುದರ ಮೂಲಕ ಹಾಗೂ ಆರೋಗ್ಯಕರ ಅಭ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ಸಮಸ್ಯೆಯಿಂದ ದೂರ ಉಳಿಯಬರುದು.

ವಯಸ್ಸಾದವರಲ್ಲಿ ಬೀಳುವಿಕೆಯು ಅತ್ಯಂತ ಸಾಮಾನ್ಯವಾಗಿದ್ದು, ಸೊಂಟದ ಮೂಳೆ ಮುರಿತದಂತಹ ಗಂಭೀರವಾದ ಸಮಸ್ಯೆಗಳನ್ನು ಎದುರು ಮಾಡುತ್ತವೆ. ಈ ನಿಟ್ಟಿನಲ್ಲಿ ಮನೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ನೀರು, ಎಣ್ಣೆ ಚೆಲ್ಲದಂತೆ ನೋಡಿಕೊಳ್ಳಬೇಕು. ವಯಸ್ಸಾದವರು ಹಿಡಿದುಕೊಂಡು ನಡೆಯಲು ವ್ಯವಸ್ಥೆಗಳನ್ನು ಕಲ್ಪಿಸಬೇಕು. ನಿಯಮಿತ ವ್ಯಾಯಾಮಗಳನ್ನು ಇಲ್ಲಿ ಶಿಫಾರಸ್ಸು ಮಾಡಲಾಗುತ್ತದೆ ಎಂದು ಹೇಳಿದ್ದಾರೆ.


Stay up to date on all the latest ಆರೋಗ್ಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp