
ಮಳೆಗಾಲ ಬಂತೆಂದರೆ ಹಲವರಿಗೆ ತಲೆ ಬಿಸಿಯಾಗುವುದುಂಟು... ಇದಕ್ಕೆ ಕಾರಣ ಹವಾಮಾನ ಬದಲಾವಣೆಯಿಂದ ಎದುರಾಗುವ ಅನಾರೋಗ್ಯ. ಮಳೆಗಾಲದಲ್ಲಿ ಅನಾರೋಗ್ಯ ಎದುರಾಗುವುದು ಸಾಮಾನ್ಯ. ಆದರೆ, ಅದರಿಂದ ದೂರ ಉಳಿಯಬೇಕೆಂದರೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಅತ್ಯಗತ್ಯ. ಈ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಹಳ ಮುಖ್ಯವಾಗುತ್ತದೆ.
ರೋಗನಿರೋಧಕ ಶಕ್ತಿಯು ನಮ್ಮ ದೇಹವನ್ನು ಸಾಂಕ್ರಾಮಿಕ ಜೀವಿಗಳಿಂದ ರಕ್ಷಿಸುತ್ತದೆ. ರೋಗನಿರೋಧಕ ಶಕ್ತಿಯ ಹೊರತು ನಮ್ಮ ದೇಹಕ್ಕೆ ಹಲವಾರು ರೀತಿಯ ಬ್ಯಾಕ್ಟೀರಿಯಗಳು, ವೈರಸ್ಗಳು ಮತ್ತು ಇತರ ರೋಗಕಾರಕಗಳು ನಮ್ಮ ದೇಹವನ್ನು ಆಕ್ರಮಣ ಮಾಡುತ್ತವೆ. ಅಂದರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯು ಉತ್ತಮ ಮಟ್ಟದಲ್ಲಿ ಇದ್ದರೆ, ಪದೇಪದೇ ಕಾಯಿಲೆಗೆ ಬೀಳುವ ಸಂದರ್ಭ ಎದುರಾಗುವುದಿಲ್ಲ. ಆದ್ದರಿಂದ ಒಬ್ಬ ವ್ಯಕ್ತಿಯು ಆರೋಗ್ಯಯುತವಾಗಿ ಇರಬೇಕೆಂದರೆ ಆ ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿಯ ಮಟ್ಟ ಹೆಚ್ಚಿನ ಪ್ರಮಾಣದಲ್ಲಿ ಇರಬೇಕಾಗುತ್ತದೆ.
ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಆಗಾಗ್ಗೆ ಜ್ವರ, ಕೆಮ್ಮು ಮತ್ತು ಶೀತ, ಅತಿಯಾದ ಆಯಾಸ, ಗಾಯಗಳು ಒಣಗದೆ ಇರುವುದು, ಸೋಮಾರಿತನ, ಜೀರ್ಣಕ್ರಿಯೆಯಲ್ಲಿ ಸಮಸ್ಯೆಗಳು ಎದುರಾಗುತ್ತಲೇ ಇರುತ್ತವೆ.
ಈ ಲಕ್ಷಣಗಳು ಇರುವವರು ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕಾಗುತ್ತದೆ. ಇಲ್ಲದಿದ್ದರೆ, ಅವುಗಳೊಂದಿಗೆ ಅನೇಕ ರೋಗಗಳು ಶುರುವಾಗುವ ಅಪಾಯವಿರುತ್ತದೆ. ಹೀಗಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಅತ್ಯಗತ್ಯವಾಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಹಳ ಮುಖ್ಯವಾಗುತ್ತದೆ.
ಇದನ್ನೂ ಓದಿ: ಆರೋಗ್ಯಕರ ಜೀವನಕ್ಕೆ ಆಹಾರ ಕ್ರಮ ಹೀಗಿರಲಿ...
ದೇಹದ ಎಲ್ಲಾ ಜೀವಕೋಶಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲು ಪೌಷ್ಟಿಕಾಂಶದ ಅಗತ್ಯ ಹೆಚ್ಚಾಗಿರುತ್ತದೆ. ದೇಹಕ್ಕೆ ಸೋಂಕು ತಗುಲಿದ ಸಂದರ್ಭದಲ್ಲಿ ಈ ಪೌಷ್ಟಿಕಾಂಶ ದೇಹಕ್ಕೆ ಶಕ್ತಿಯನ್ನು ಹೆಚ್ಚಿಸುತ್ತದೆ. ಹೀಗಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಅತ್ಯಗತ್ಯವಾಗಿರುತ್ತದೆ.
Advertisement