ಶಿರಸಿಯಲ್ಲಿ ವಿಶ್ವೇಶ್ವರ ಕಾಗೇರಿಗೆ ಸೋಲು!

ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸೋಲಾಗಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸೋಲಾಗಿದೆ.

ಆರಂಭದಿಂದ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ 10 ಸುತ್ತಿನಲ್ಲಿ ಹಿನ್ನಡೆ ಕಂಡಿತ್ತು. ಮತ್ತೆ ಚೇತರಿಕೆ ಕಂಡ ಬಿಜೆಪಿ 16ನೇ ಸುತ್ತಿನ ಎಣಿಕೆಯಲ್ಲಿ ಕೂಡ ಮುನ್ನಡೆ ಸಾಧಿಸಿತ್ತು.

ಕೊನೆಯವರೆಗೂ ತೀವ್ರ ಪೈಪೋಟಿ ನೀಡಿದ ಕಾಂಗ್ರೆಸ್, ಕೊನೆಯ 2 ಸುತ್ತುಗಳಲ್ಲಿ ಮುನ್ನಡೆ ಸಾಧಿಸಿತು. ಅಂತಿಮವಾಗಿ 5800 ಮತಗಳ ಅಂತರದಿಂದ ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಅವರು ಗೆಲುವಿನ ನಗೆ ಬೀರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com