ರಾಜ್ಯ ಚುನಾವಣೆ ಫಲಿತಾಂಶ 2023: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್'ಗೆ ಹಿನ್ನಡೆ

ರಾಜ್ಯ ವಿಧಾನಸಭಾ ಚುನಾವಣೆ 2023ರ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಸಿರವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಹಿನ್ನಡೆಯುಂಟಾಗಿದೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ 2023ರ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಸಿರವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಹಿನ್ನಡೆಯುಂಟಾಗಿದೆ.

ಈ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಹೇಶ್ ಟೆಂಗಿನಕಾಯಿ ಮುನ್ನಡೆ ಸಾಧಿಸಿದ್ದಾರೆ. ಶೆಟ್ಟರ್ ವಿರುದ್ಧ 7,496ಗಳ ಅಂತರಪಗಳಿಂದ ಮಹೇಶ್ ಮುನ್ನಡೆ ಸಾಧಿಸಿದ್ದಾರೆ.

ಜಗದೀಶ್ ಶೆಟ್ಟರ್ 1994ರಿಂದಲೂ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಶಾಸಕ, ಮಂತ್ರಿ, ಮುಖ್ಯಮಂತ್ರಿ ಹುದ್ದೇಗೇರಿದವರು ಜಗದೀಶ್ ಶೆಟ್ಟರ್. ಟಿಕೆಟ್ ನೀಡದ ಒಂದೇ ಕಾರಣಕ್ಕಾಗಿ ಬಿಜೆಪಿ ಜೊತೆಗಿನ ದೀರ್ಘಕಾಲದ ಸಂಬಂಧ ಮುರಿದುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ವಿರುದ್ಧ ಬಿಜೆಪಿ ಪಕ್ಷದಿಂದ ಮಹೇಶ್ ಟೆಂಗಿನಕಾಯಿ ಸ್ಪರ್ಧಿಸಿದ್ದು, ತೀವ್ರ ಪೈಪೋಟಿ ನೀಡಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಯಾರ ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಇಂದು ಮಧ್ಯಾಹ್ನದೊಳಗಾಗಿ ಸ್ಪಷ್ಟ ಚಿತ್ರಣಗಳು ದೊರೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com