ಕರ್ನಾಟಕ ಚುನಾವಣೆ ಫಲಿತಾಂಶ: ಬಿಜೆಪಿಯ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮುನ್ನಡೆ

ಬಿಜೆಪಿಯ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ದತ್ತಪೀಠ ಚಳವಳಿಯ ಹಿನ್ನೆಲೆಯಲ್ಲಿ ಹಿಂದುತ್ವವಾದಿಗಳು ಈ ಪ್ರದೇಶವನ್ನು ಕರ್ನಾಟಕದ ಅಯೋಧ್ಯೆ ಎಂದು ಕರೆಯುತ್ತಾರೆ.
ಕಾಂಗ್ರೆಸ್
ಕಾಂಗ್ರೆಸ್

ಬೆಂಗಳೂರು: ಬಿಜೆಪಿಯ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ದತ್ತಪೀಠ ಚಳವಳಿಯ ಹಿನ್ನೆಲೆಯಲ್ಲಿ ಹಿಂದುತ್ವವಾದಿಗಳು ಈ ಪ್ರದೇಶವನ್ನು ಕರ್ನಾಟಕದ ಅಯೋಧ್ಯೆ ಎಂದು ಕರೆಯುತ್ತಾರೆ.
ಹಿಂದಿನ ಚುನಾವಣೆಯಲ್ಲಿ ಕೋಮು ವಿಭಜಿತ ಜಿಲ್ಲೆಯ ಎಲ್ಲ ಐದು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಜಿಲ್ಲೆಯು ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ತರೀಕೆರೆ ಮತ್ತು ಕಡೂರು ಕ್ಷೇತ್ರಗಳನ್ನು ಒಳಗೊಂಡಿದೆ.

ಆನೆ ಕಾಟಕ್ಕೆ ಸಂಬಂಧಿಸಿದಂತೆ ಮುಡಿಗೆರೆ ಕ್ಷೇತ್ರದ ಜನತೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದರು ಮತ್ತು ಅವರ ಬಟ್ಟೆ ಹರಿದಿದ್ದರು. ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು.

ಶೃಂಗೇರಿ ಕ್ಷೇತ್ರದಲ್ಲಿ ಬಿಜೆಪಿಯ ಡಿ.ಎನ್.ದೇವರಾಜು 12,747 ಮತ್ತು ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ 15,425 ಮತಗಳನ್ನು ಪಡೆದಿದ್ದಾರೆ. ಮೂಡಿಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ 15,293 ಮತ್ತು ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ 14,000 ಮತಗಳನ್ನು ಪಡೆದಿದ್ದಾರೆ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ. ನಯನಾ ಮೋಟಮ್ಮ ಮುನ್ನಡೆ ಸಾಧಿಸಿರುವುದನ್ನು ಗ್ರೌಂಡ್ ರಿಪೋರ್ಟ್ ದೃಢಪಡಿಸಿದೆ.

ತರೀಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಜಿಎಚ್ ಶ್ರೀನಿವಾಸ 20,563 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಡಿ.ಎಸ್. ಸುರೇಶ್ 17,917 ಮತಗಳನ್ನು ಗಳಿಸಿದ್ದಾರೆ. ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ 23,352 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್ 21,976 ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಹಾಲಿ ಶಾಸಕ ಸಿ.ಟಿ. ರವಿ ಕಾಂಗ್ರೆಸ್ ಅಭ್ಯರ್ಥಿಗಿಂತ ಹಿಂದೆ ಬಿದ್ದಿದ್ದಾರೆ. ರವಿ 20,473 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ. ತಮ್ಮಯ್ಯ 22,435 ಮತಗಳನ್ನು ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com