ರಾಜ್ಯ ವಿಧಾನಸಭೆ ಚುನಾವಣೆ 2023; ಕನಕಪುರದಲ್ಲಿ ಡಿಕೆಶಿ ಭರ್ಜರಿ ಓಟ; 11,500 ಮತಗಳಿಂದ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರಂಭಿಕ ಮತಎಣಿಕೆ ಪ್ರಕ್ರಿಯೆಯಲ್ಲಿ ಕನಕಪುರದಲ್ಲಿ ಡಿಕೆ.ಶಿವಕುಮಾರ್ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Updated on

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರಂಭಿಕ ಮತಎಣಿಕೆ ಪ್ರಕ್ರಿಯೆಯಲ್ಲಿ ಕನಕಪುರದಲ್ಲಿ ಡಿಕೆ.ಶಿವಕುಮಾರ್ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನಕಪುರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರ್.ಅಶೋಕ್​ಗಿಂತ 11,500 ಮತಗಳಿಂದ ಡಿಕೆ.ಶಿವಕುಮಾರ್ ಅವರು ಮುನ್ನಡೆ ಸಾಧಿಸಿದ್ದಾರೆ.

ಸತತ 7 ಗೆಲುವು ಸಾಧಿಸಿರುವ ಡಿ.ಕೆ.ಶಿವಕುಮಾರ್ ಸೋಲಿಸಲು ಬಿಜೆಪಿ ರಾಷ್ಟ್ರೀಯ ನಾಯಕರು ಶಪಥ ಮಾಡಿದಂತೆ ಈ ಚುನಾವಣೆ ಭಾಸವಾಗಿತ್ತು.

ಆರ್.ಅಶೋಕ್ ಪದ್ಮನಾಭನಗರ ಕ್ಷೇತ್ರದ ಜತೆ ಕನಕಪುರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಿದ್ದರು. ಮೇ 10ರಂದು ರಾಮನಗರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿತ್ತು. ಈ ಪೈಕಿ ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ವೋಟಿಂಗ್ ನಡೆದಿದ್ದು, ಅಭ್ಯರ್ಥಿಗಳ ಹಣೆಬರಹ ಇನ್ನೇನು ನಿರ್ಧಾರವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com