ಸರ್ಕಾರ ರಚನೆ ಕುರಿತು ಯಾವದೇ ಪಕ್ಷ ನನ್ನನ್ನು ಸಂಪರ್ಕಿಸಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ನಮ್ಮದು ಸಣ್ಣ ಪಕ್ಷ, ಬೇಡಿಕೆಗಳೇನೂ ಇಲ್ಲ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸರ್ಕಾರ ರಚನೆ ಕುರಿತು ಯಾವುದೇ ಪಕ್ಷ ನನ್ನನ್ನು ಸಂಪರ್ಕಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಈ ನಡುವಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿರುವ ಕುಮಾರಸ್ವಾಮಿಯವರು ಮೈತ್ರಿ ಸರ್ಕಾರ ರಚನೆ ಕುರಿತ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದರು.

ಮುಂದಿನ 2-3 ಗಂಟೆಗಳಲ್ಲಿ ಸ್ಪಷ್ಟ ಚಿತ್ರಗಳು ಸಿಗಲಿದೆ. ಸಮೀಕ್ಷೆಗಳೆಲ್ಲವೂ ರಾಷ್ಟ್ರೀಯ ಪಕ್ಷಗಳು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಭವಿಷ್ಯ ನುಡಿದಿವೆ. ಜೆಡಿಎಸ್ 30-32 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದೂ ಹೇಳಿವೆ. ನಮ್ಮದು ಸಣ್ಣ ಪಕ್ಷ, ಯಾವುದೇ ಆಗ್ರಹಗಳಿಲ್ಲ, ಉತ್ತಮ ಬೆಳವಣಿಗೆಯ ನಿರೀಕ್ಷೆಗಳಿವೆ ಎಂದು ಹೇಳಿದ್ದಾರೆ.

ಈ ವರೆಗೂ ಯಾವುದೇ ಪಕ್ಷಗಳೂ ನಮ್ಮನ್ನು ಸಂಪರ್ಕಿಸಿಲ್ಲ. ನಮ್ಮಿಂದ ಯಾವುದೇ ಷರತ್ತುಗಳೂ ಇಲ್ಲ. ನಮ್ಮದು ಸಣ್ಣ ಪಕ್ಷವಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com