social_icon

ಕರಾವಳಿ ಕರ್ನಾಟಕದಲ್ಲಿ ನೆಲೆ ಉಳಿಸಿಕೊಂಡ ಬಿಜೆಪಿ, ಮತ್ತೆ ನಾಲ್ಕು ಸ್ಥಾನಗಳನ್ನು ತೆಕ್ಕೆಗೆ ತೆಗೆದುಕೊಂಡ ಕಾಂಗ್ರೆಸ್!

ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಬಲವಾದ ಅಲೆಯ ಹೊರತಾಗಿಯೂ, ಬಿಜೆಪಿಯು ಕರಾವಳಿ ಕರ್ನಾಟಕದ ತನ್ನ ಕೋಟೆಯನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. 2018ರಲ್ಲಿ 18 ಕ್ಷೇತ್ರಗಳ ಪೈಕಿ 16 ಸ್ಥಾನ ಗೆದ್ದಿದ್ದ ಬಿಜೆಪಿ, ಈಗ ಕೇವಲ 13 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು.

Published: 14th May 2023 10:02 AM  |   Last Updated: 14th May 2023 10:02 AM   |  A+A-


BJP

ಬಿಜೆಪಿ

Posted By : Ramyashree GN
Source : Online Desk

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಬಲವಾದ ಅಲೆಯ ಹೊರತಾಗಿಯೂ, ಬಿಜೆಪಿಯು ಕರಾವಳಿ ಕರ್ನಾಟಕದ ತನ್ನ ಕೋಟೆಯನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. 2018ರಲ್ಲಿ 18 ಕ್ಷೇತ್ರಗಳ ಪೈಕಿ 16 ಸ್ಥಾನ ಗೆದ್ದಿದ್ದ ಬಿಜೆಪಿ, ಈಗ ಕೇವಲ 13 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು.

ಕಾಂಗ್ರೆಸ್ 2 ರಿಂದ 6ಕ್ಕೆ ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ. ಕರಾವಳಿ ಕರ್ನಾಟಕದಲ್ಲಿ ಜೆಡಿಎಸ್ ಖಾಲಿಯಾಗಿದೆ. ರಾಜಕೀಯ ಪಂಡಿತರ ಪ್ರಕಾರ, ಹಿಂದುತ್ವದ ಅಂಶವು ಆಡಳಿತ ವಿರೋಧಿ ಅಲೆಯನ್ನು ದೊಡ್ಡ ಪ್ರಮಾಣದಲ್ಲಿ ಸರಿದೂಗಿಸಲು ಬಿಜೆಪಿಗೆ ಸಹಾಯ ಮಾಡಿದೆ ಮತ್ತು ಬಜರಂಗ ದಳವನ್ನು ನಿಷೇಧಿಸುವ ಕಾಂಗ್ರೆಸ್‌ನ ಪ್ರಸ್ತಾಪವು ಕೇಸರಿ ಪಕ್ಷಕ್ಕೆ ತನ್ನ ಮತಗಳನ್ನು ಕ್ರೋಢೀಕರಿಸಲು ಸಹಾಯ ಮಾಡಿದೆ.

ಉತ್ತರ ಕನ್ನಡದಲ್ಲಿ ಬಿಜೆಪಿ ಬಹುತೇಕ ಸೋತಿದ್ದು, ಆರು ಸ್ಥಾನಗಳ ಪೈಕಿ ಎರಡನ್ನು ಮಾತ್ರ ಗೆದ್ದಿದೆ. ಸ್ಪೀಕರ್ ಮತ್ತು ಆರು ಬಾರಿ ಗೆದ್ದಿದ್ದ  ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮೊದಲ ಬಾರಿಗೆ ಸಿರಸಿಯಲ್ಲಿ ನೆಲಕಚ್ಚಬೇಕಾಯಿತು.

ಹಳಿಯಾಳದಿಂದ ಆರ್.ವಿ. ದೇಶಪಾಂಡೆ (ಕಾಂಗ್ರೆಸ್) ದಾಖಲೆಯ ಒಂಬತ್ತನೇ ಬಾರಿ ಗೆಲುವು ಸಾಧಿಸಿದ್ದಾರೆ. ಮಂಕಾಳ್ ವೈದ್ಯ (ಕಾಂಗ್ರೆಸ್) ಭಟ್ಕಳದಿಂದ 32 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕುಮಟಾದಲ್ಲಿ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಅವರ ಪುತ್ರಿ ನಿವೇದಿತ್ ಆಳ್ವ ಅವರು ಕೇವಲ 19,270 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಚುನಾವಣೆ: ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ಯಾರು? 

ಉಡುಪಿಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಅಲ್ಲಿ ಎಲ್ಲಾ ಐವರು ಅಭ್ಯರ್ಥಿಗಳು ಗೆದ್ದಿದ್ದಾರೆ. ಕಾರ್ಕಳದಿಂದ 4,600ಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿರುವ ವಿ ಸುನಿಲ್ ಕುಮಾರ್ ಹೊರತುಪಡಿಸಿ ಉಳಿದ ನಾಲ್ವರು ಉತ್ತಮ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಎಂಟು ಸ್ಥಾನಗಳ ಪೈಕಿ ಆರರಲ್ಲಿ ಬಿಜೆಪಿ ಗೆದ್ದಿದೆ. ಪುತ್ತೂರಿನಲ್ಲಿ ಕಾಂಗ್ರೆಸ್‌ನ ಅಶೋಕ್ ಕುಮಾರ್ ರೈ 4149 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಯು.ಟಿ. ಖಾದರ್ (ಕಾಂಗ್ರೆಸ್) ಮಂಗಳೂರಿನಲ್ಲಿ ಐದನೇ ಬಾರಿಗೆ ಗೆಲುವು ದಾಖಲಿಸಿದರೆ, ಹಿರಿಯ ಕಾಂಗ್ರೆಸ್ ನಾಯಕ ಬಿ ರಮಾನಾಥ್ ರೈ ಸೋತಿದ್ದಾರೆ.


Stay up to date on all the latest ಸುದ್ದಿಗಳು news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp