ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಹಿಳೆ ಜತೆ ಅಸಭ್ಯ ವರ್ತನೆ: ಸಾಫ್ಟ್ ವೇರ್ ಇಂಜಿನಿಯರ್ ಗೆ ಥಳಿತ

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಸಾಫ್ಟ್ ವೇರ್ ಇಂಜಿನಿಯರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ನಿನ್ನೆ ಬೆಂಗಳೂರಿನ...
ಬೆಂಗಳೂರು: ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಸಾಫ್ಟ್ ವೇರ್ ಇಂಜಿನಿಯರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ನಿನ್ನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ.
ಶ್ರೀರಾಮಮೂರ್ತಿ (37) ಥಳಿತಕ್ಕೊಳಗಾದ ಸಾಫ್ಟ್ ವೇರ್ ಇಂಜಿನಿಯರ್. ಬಸವೇಶ್ವರನಗರ ಸಮೀಪದ ಪಶ್ಚಿಮ ಕಾರ್ಡ್ ರಸ್ತೆ ಬಳಿ ಬೆಳಿಗ್ಗೆ ಸುಮಾರು 9.30ರ ವೇಳೆಗೆ ಗಾರ್ಮೆಂಟ್ ಉದ್ಯೋಗಿ ಗಾಯನಾ ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಆಕೆಯನ್ನು ಶ್ರೀರಾಮಮೂರ್ತಿ ಹಿಂಬಾಲಿಸಿಕೊಂಡು ಬಂದು, ಮಾರ್ಗ ಮಧ್ಯ ತಡೆದು ಅಸಭ್ಯವಾಗಿ ವರ್ತಿಸಿದ್ದಾನೆ.
ತಕ್ಷಣ ಆಕೆ ತನ್ನ ಪತಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಿಯರೊಂದಿಗೆ ಸ್ಥಳಕ್ಕೆ ಆಗಮಿಸಿದ ಪತಿ ಆತನನ್ನು ಹಿಡಿದು ರಸ್ತೆ ಬದಿಯ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಘಟನೆ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com